Advertisement
MIRROR FOCUS

ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!

Share

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಿರೇನಗನೂರು ಗ್ರಾಮದ ರೈತ ಪ್ರದೀಪ್ ಗೌಡ ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ ಮಾಡಿ, ಉತ್ತಮ ಇಳುವರಿ ಬಂದಿದ್ದು ಲಾಭದ ನಿರೀಕ್ಷೆಯಲ್ಲಿದ್ದಾರೆ.  ಸ್ಥಳೀಯವಾಗಿ ದೊರೆಯುವ ಸಜ್ಜೆಯನ್ನು ಬಿತ್ತನೆ ಮಾಡದೇ ಹೊಸದಾಗಿ ಟರ್ಕಿ ದೇಶದ ಸಜ್ಜೆಯನ್ನು ಬಿತ್ತನೆ ಮಾಡಿದ್ದಾರೆ.

ಟರ್ಕಿ ದೇಶದ ಸಜ್ಜೆಯು ಅಧಿಕ ಇಳುವರಿಯೊಂದಿಗೆ 12 ಅಡಿ ಎತ್ತರ ಹಾಗೂ  3.5 ಅಡಿ ತೆನೆ ಬೆಳೆಯುತ್ತದೆ. ತೆನೆಯಲ್ಲಿ ಸಜ್ಜೆ ಕಾಳು ಜಾಸ್ತಿ ಇರಲಿದ್ದು,  ಪ್ರತಿ ಎಕರೆಗೆ 10 ರಿಂದ 15 ಕ್ವಿಂಟಾಲ್ ನಷ್ಟು ಫಸಲು ನೀಡಲಿದೆ. ಯಾವುದೇ ರಾಸಾಯನಿಕ ಗೊಬ್ಬರ, ಔಷಧಿಗಳನ್ನು ಸಿಂಪಡಿಸದೇ ಕೊಟ್ಟಿಗೆ ಗೊಬ್ಬರದಿಂದ ಸಾಮಾನ್ಯವಾಗಿ ಬೆಳೆಯುವ ಸಜ್ಜೆಯ ರೀತಿ ಈ ಬೆಳೆಯನ್ನು ಬೆಳೆಯಬಹುದಾಗಿದೆ.

ಸುಮಾರು  ನಾಲ್ಕು ತಿಂಗಳ ನಂತರ ಕಟಾವಿಗೆ ಬರುವ ಬೆಳೆ ಇದಾಗಿದ್ದು, ಸ್ಥಳೀಯವಾಗಿ ಬೆಳೆಯುವ ಸಜ್ಜೆಗಿಂತ  ಟರ್ಕಿ  ಸಜ್ಜೆ  ಹೆಚ್ಚುವ ಇಳುವರಿ  ನೀಡಲಿದೆ. ಜೊತೆಗೆ  ಯಾವುದೇ ಕೀಟಬಾಧೆ ಇರುವುದಿಲ್ಲ. ರೈತರಿಗೆ   ಕೃಷಿ ಅಧಿಕಾರಿಗಳು  ಸರಿಯಾದ  ಮಾಹಿತಿ ಒದಗಿಸಿ, ಈ ತಳಿಯನ್ನು ಹೆಚ್ಚು ಬೆಳೆಯುವಂತೆ  ಪ್ರೋತ್ಸಾಹಿಸುವ ಅಗತ್ಯವಿದೆ ಎನ್ನುತ್ತಾರೆ ರೈತರು.

ಈ ಬಗ್ಗೆ ಮಾತನಾಡಿದ ಪ್ರದೀಪ್‌ ಗೌಡ, ಟರ್ಕಿ ಸಜ್ಜೆಯನ್ನು ಒಂದು ಎಕರೆಯಲ್ಲಿ ಬಿತ್ತನೆ ಮಾಡಲಾಗಿದ್ದು, ಉತ್ತಮ ಇಳುವರಿ ಬರುವ ನಿರೀಕ್ಷೆಯಿದೆ. ಸಜ್ಜೆ ತೆನೆ ಕನಿಷ್ಠ  ಮೂರೂವರೆ ಅಡಿ ಇರಲಿದ್ದು, ಇಳುವರಿಯೂ  ಹೆಚ್ಚಾಗಲಿದೆ. ಸಾಮಾನ್ಯ ಸಜ್ಜೆ  ಪ್ರತಿ ಎಕರೆಗೆ  5ರಿಂದ  8 ಕ್ವಿಂಟಾಲ್  ಇಳುವರಿ ನೀಡಿದರೆ,  ಟರ್ಕಿ ಸಜ್ಜೆ  10ರಿಂದ 15 ಕ್ವಿಂಟಾಲ್  ನೀಡಲಿದೆ.ಇದರಿಂದ ಹೆಚ್ಚು ಅನುಕೂಲವಾಗಲಿದೆ   ಎನ್ನುತ್ತಾರೆ.

ಟರ್ಕಿ ಸಜ್ಜೆ ಒಂದು ಕೆ ಜಿಗೆ 2 ಸಾವಿರ ರೂಪಾಯಿ ಬೆಲೆಯಿದ್ದು, ಸಾಮಾನ್ಯ ಸಜ್ಜೆಗಿಂತ ಉತ್ತಮ ಇಳುವರಿ ಬರಲಿದ್ದು, ರೈತರಿಗೆ ಅನುಕೂಲವಾಗಲಿದೆ ಎನ್ನುತ್ತಾರೆ ರೈತ ಅಂಬರೀಶ್. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ

ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…

5 minutes ago

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

7 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

7 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

7 hours ago

ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ

ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…

7 hours ago

ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ

ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…

7 hours ago