MIRROR FOCUS

#NitiAayog | ಬಿಸಿಲನಾಡು ರಾಯಚೂರಿಗೆ ದೇಶದಲ್ಲೇ ನಂ.1 ರ‍್ಯಾಂಕ್ | ಕೇಂದ್ರದ ನೀತಿ ಆಯೋಗದಿಂದ 10 ಕೋಟಿ ರೂ. ಬಹುಮಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ರಾಜ್ಯದಲ್ಲಿ ದಕ್ಷಿಣ ಕರ್ನಾಟಕವನ್ನು ಹೋಲಿಸಿದರೆ ಉತ್ತರ ಕರ್ನಾಟಕ ಜಿಲ್ಲೆಗಳು ಬಹಳಷ್ಟು ವಿಷಯದಲ್ಲಿ ಬಹಳ ಹಿಂದೆ ಇವೆ. ಅಭಿವೃದ್ಧಿಯಾಗಲಿ, ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಸೇರಿದಂತೆ ಇನ್ನು ಹಲವು. ಸುಡು ಬಿಸಿಲು, ಬರಗಾಲದ ಜಿಲ್ಲೆಗಳು, ಜನ ಜೀವನ ಕಷ್ಟ ಎಂಬ ಭಾವನೆಯಿದೆ. ಆದರೆ ಅಲ್ಲಿ ಮಳೆ ಬೆಳೆ ಆದರೆ ನಮ್ಮ ರಾಜ್ಯ ಸುಭಿಕ್ಷವಾಗಿರುತ್ತದೆ. ಆದರೆ ಬರಗಾಲದ ನಾಡು ರಾಯಚೂರು ಜಿಲ್ಲೆ ಇಡೀ ದೇಶದಲ್ಲಿ ಈಗ ನಂಬರ್ ಒನ್ ಆಗಿದೆ.

Advertisement

ಅಖಿಲ ಭಾರತ ಮಹತ್ವಾಕಾಂಕ್ಷೆಯ ಜಿಲ್ಲಾ ಡೆಲ್ಟಾ ಶ್ರೇಯಾಂಕ ಪ್ರಕಟವಾಗಿದ್ದು, ಕೇಂದ್ರದ ನೀತಿ ಆಯೋಗದ ಸಮೀಕ್ಷೆಯಲ್ಲಿ ಜಿಲ್ಲೆಗೆ ಫಸ್ಟ್ ರ‍್ಯಾಂಕ್ ನೀಡಲಾಗಿದೆ. ಸಮಗ್ರ ಸಾಧನೆಯಲ್ಲಿ ಜಿಲ್ಲೆಗೆ 1ನೇ ರ‍್ಯಾಂಕ್ ಬಂದಿದೆ. 10 ಕೋಟಿ ರೂ. ವಿಶೇಷ ಬಹುಮಾನಕ್ಕೂ ರಾಯಚೂರು ಜಿಲ್ಲೆ ಅರ್ಹತೆ ಪಡೆದಿದೆ. ಕೃಷಿ, ಶಿಕ್ಷಣ, ಮೂಲ ಸೌಕರ್ಯ, ಆರೋಗ್ಯ, ಆರ್ಥಿಕ ಸೇರ್ಪಡೆ ಹಾಗೂ ಕೌಶಲ್ಯ ಅಭಿವೃದ್ಧಿ ಸೇರಿ ಜಿಲ್ಲೆಯ ಸ್ಥಿತಿಗತಿಗಳ ವಾಸ್ತವ ವರದಿಗಳ ಪರಿಶೀಲನೆ ನಡೆಸಿ ನೀತಿ ಆಯೋಗ ರ‍್ಯಾಂಕ್ ನೀಡಿದೆ. ದೇಶದ ಒಟ್ಟು 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರಿಗೆ ಮೊದಲ ಸ್ಥಾನ ಬಂದಿದೆ.

ಶಿಕ್ಷಣ ಹಾಗೂ ಕೃಷಿಯಲ್ಲಿ ಈ ಮೊದಲು ಮೊದಲ ರ‍್ಯಾಂಕ್ ಪಡೆದಿದ್ದ ಜಿಲ್ಲೆ ಜೂನ್ ತಿಂಗಳ ಸಮೀಕ್ಷೆಯಲ್ಲಿ ಸಮಗ್ರ ಸಾಧನೆಯಲ್ಲಿ 1ನೇ ರ್ಯಾಂಕ್ ಪಡೆದಿದೆ. ಕೇಂದ್ರ ಸರ್ಕಾರ ಹಾಗೂ ನೀತಿ ಆಯೋಗದಿಂದ ಹೆಚ್ಚುವರಿ ಅನುದಾನ ಪಡೆಯಲಿದೆ. ಜಿಲ್ಲೆ ಮೊದಲ ರ್ಯಾಂಕ್ ಪಡೆದಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಸಿಬ್ಬಂದಿ ಕಾರ್ಯವೈಖರಿ ಶ್ಲಾಘಿಸಿದ್ದಾರೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.

2 hours ago

ವೃಶ್ಚಿಕ ರಾಶಿ ಯುಗಾದಿ ಸಂವತ್ಸರದ ಫಲಗಳು | ಹೇಗಿದೆ ಈ ವರ್ಷ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

2 hours ago

ದೇವಸ್ಥಾನದ ಬ್ರಹ್ಮಕಲಶೋತ್ಸವಗಳಲ್ಲಿ “ರಾಜಕೀಯದ ಚಪ್ಪಲು” ಹೊರಗಿಡಬೇಕು |

ಒಂದು ದೇವಸ್ಥಾನದ ಎಂದರೆ ಶ್ರದ್ಧೆಯ ಕೇಂದ್ರ, ಒಂದು ಊರಿನ ದೇವಸ್ಥಾನ ಎಂದರೆ ಸೌಹಾದರ್ತೆಯ…

3 hours ago

ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ

ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.

11 hours ago

ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |

ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…

12 hours ago