Advertisement
MIRROR FOCUS

#NitiAayog | ಬಿಸಿಲನಾಡು ರಾಯಚೂರಿಗೆ ದೇಶದಲ್ಲೇ ನಂ.1 ರ‍್ಯಾಂಕ್ | ಕೇಂದ್ರದ ನೀತಿ ಆಯೋಗದಿಂದ 10 ಕೋಟಿ ರೂ. ಬಹುಮಾನ |

Share

ನಮ್ಮ ರಾಜ್ಯದಲ್ಲಿ ದಕ್ಷಿಣ ಕರ್ನಾಟಕವನ್ನು ಹೋಲಿಸಿದರೆ ಉತ್ತರ ಕರ್ನಾಟಕ ಜಿಲ್ಲೆಗಳು ಬಹಳಷ್ಟು ವಿಷಯದಲ್ಲಿ ಬಹಳ ಹಿಂದೆ ಇವೆ. ಅಭಿವೃದ್ಧಿಯಾಗಲಿ, ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಸೇರಿದಂತೆ ಇನ್ನು ಹಲವು. ಸುಡು ಬಿಸಿಲು, ಬರಗಾಲದ ಜಿಲ್ಲೆಗಳು, ಜನ ಜೀವನ ಕಷ್ಟ ಎಂಬ ಭಾವನೆಯಿದೆ. ಆದರೆ ಅಲ್ಲಿ ಮಳೆ ಬೆಳೆ ಆದರೆ ನಮ್ಮ ರಾಜ್ಯ ಸುಭಿಕ್ಷವಾಗಿರುತ್ತದೆ. ಆದರೆ ಬರಗಾಲದ ನಾಡು ರಾಯಚೂರು ಜಿಲ್ಲೆ ಇಡೀ ದೇಶದಲ್ಲಿ ಈಗ ನಂಬರ್ ಒನ್ ಆಗಿದೆ.

ಅಖಿಲ ಭಾರತ ಮಹತ್ವಾಕಾಂಕ್ಷೆಯ ಜಿಲ್ಲಾ ಡೆಲ್ಟಾ ಶ್ರೇಯಾಂಕ ಪ್ರಕಟವಾಗಿದ್ದು, ಕೇಂದ್ರದ ನೀತಿ ಆಯೋಗದ ಸಮೀಕ್ಷೆಯಲ್ಲಿ ಜಿಲ್ಲೆಗೆ ಫಸ್ಟ್ ರ‍್ಯಾಂಕ್ ನೀಡಲಾಗಿದೆ. ಸಮಗ್ರ ಸಾಧನೆಯಲ್ಲಿ ಜಿಲ್ಲೆಗೆ 1ನೇ ರ‍್ಯಾಂಕ್ ಬಂದಿದೆ. 10 ಕೋಟಿ ರೂ. ವಿಶೇಷ ಬಹುಮಾನಕ್ಕೂ ರಾಯಚೂರು ಜಿಲ್ಲೆ ಅರ್ಹತೆ ಪಡೆದಿದೆ. ಕೃಷಿ, ಶಿಕ್ಷಣ, ಮೂಲ ಸೌಕರ್ಯ, ಆರೋಗ್ಯ, ಆರ್ಥಿಕ ಸೇರ್ಪಡೆ ಹಾಗೂ ಕೌಶಲ್ಯ ಅಭಿವೃದ್ಧಿ ಸೇರಿ ಜಿಲ್ಲೆಯ ಸ್ಥಿತಿಗತಿಗಳ ವಾಸ್ತವ ವರದಿಗಳ ಪರಿಶೀಲನೆ ನಡೆಸಿ ನೀತಿ ಆಯೋಗ ರ‍್ಯಾಂಕ್ ನೀಡಿದೆ. ದೇಶದ ಒಟ್ಟು 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರಿಗೆ ಮೊದಲ ಸ್ಥಾನ ಬಂದಿದೆ.

ಶಿಕ್ಷಣ ಹಾಗೂ ಕೃಷಿಯಲ್ಲಿ ಈ ಮೊದಲು ಮೊದಲ ರ‍್ಯಾಂಕ್ ಪಡೆದಿದ್ದ ಜಿಲ್ಲೆ ಜೂನ್ ತಿಂಗಳ ಸಮೀಕ್ಷೆಯಲ್ಲಿ ಸಮಗ್ರ ಸಾಧನೆಯಲ್ಲಿ 1ನೇ ರ್ಯಾಂಕ್ ಪಡೆದಿದೆ. ಕೇಂದ್ರ ಸರ್ಕಾರ ಹಾಗೂ ನೀತಿ ಆಯೋಗದಿಂದ ಹೆಚ್ಚುವರಿ ಅನುದಾನ ಪಡೆಯಲಿದೆ. ಜಿಲ್ಲೆ ಮೊದಲ ರ್ಯಾಂಕ್ ಪಡೆದಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಸಿಬ್ಬಂದಿ ಕಾರ್ಯವೈಖರಿ ಶ್ಲಾಘಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

8 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

9 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

13 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

13 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

13 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

13 hours ago