Advertisement
MIRROR FOCUS

#NitiAayog | ಬಿಸಿಲನಾಡು ರಾಯಚೂರಿಗೆ ದೇಶದಲ್ಲೇ ನಂ.1 ರ‍್ಯಾಂಕ್ | ಕೇಂದ್ರದ ನೀತಿ ಆಯೋಗದಿಂದ 10 ಕೋಟಿ ರೂ. ಬಹುಮಾನ |

Share

ನಮ್ಮ ರಾಜ್ಯದಲ್ಲಿ ದಕ್ಷಿಣ ಕರ್ನಾಟಕವನ್ನು ಹೋಲಿಸಿದರೆ ಉತ್ತರ ಕರ್ನಾಟಕ ಜಿಲ್ಲೆಗಳು ಬಹಳಷ್ಟು ವಿಷಯದಲ್ಲಿ ಬಹಳ ಹಿಂದೆ ಇವೆ. ಅಭಿವೃದ್ಧಿಯಾಗಲಿ, ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಸೇರಿದಂತೆ ಇನ್ನು ಹಲವು. ಸುಡು ಬಿಸಿಲು, ಬರಗಾಲದ ಜಿಲ್ಲೆಗಳು, ಜನ ಜೀವನ ಕಷ್ಟ ಎಂಬ ಭಾವನೆಯಿದೆ. ಆದರೆ ಅಲ್ಲಿ ಮಳೆ ಬೆಳೆ ಆದರೆ ನಮ್ಮ ರಾಜ್ಯ ಸುಭಿಕ್ಷವಾಗಿರುತ್ತದೆ. ಆದರೆ ಬರಗಾಲದ ನಾಡು ರಾಯಚೂರು ಜಿಲ್ಲೆ ಇಡೀ ದೇಶದಲ್ಲಿ ಈಗ ನಂಬರ್ ಒನ್ ಆಗಿದೆ.

ಅಖಿಲ ಭಾರತ ಮಹತ್ವಾಕಾಂಕ್ಷೆಯ ಜಿಲ್ಲಾ ಡೆಲ್ಟಾ ಶ್ರೇಯಾಂಕ ಪ್ರಕಟವಾಗಿದ್ದು, ಕೇಂದ್ರದ ನೀತಿ ಆಯೋಗದ ಸಮೀಕ್ಷೆಯಲ್ಲಿ ಜಿಲ್ಲೆಗೆ ಫಸ್ಟ್ ರ‍್ಯಾಂಕ್ ನೀಡಲಾಗಿದೆ. ಸಮಗ್ರ ಸಾಧನೆಯಲ್ಲಿ ಜಿಲ್ಲೆಗೆ 1ನೇ ರ‍್ಯಾಂಕ್ ಬಂದಿದೆ. 10 ಕೋಟಿ ರೂ. ವಿಶೇಷ ಬಹುಮಾನಕ್ಕೂ ರಾಯಚೂರು ಜಿಲ್ಲೆ ಅರ್ಹತೆ ಪಡೆದಿದೆ. ಕೃಷಿ, ಶಿಕ್ಷಣ, ಮೂಲ ಸೌಕರ್ಯ, ಆರೋಗ್ಯ, ಆರ್ಥಿಕ ಸೇರ್ಪಡೆ ಹಾಗೂ ಕೌಶಲ್ಯ ಅಭಿವೃದ್ಧಿ ಸೇರಿ ಜಿಲ್ಲೆಯ ಸ್ಥಿತಿಗತಿಗಳ ವಾಸ್ತವ ವರದಿಗಳ ಪರಿಶೀಲನೆ ನಡೆಸಿ ನೀತಿ ಆಯೋಗ ರ‍್ಯಾಂಕ್ ನೀಡಿದೆ. ದೇಶದ ಒಟ್ಟು 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರಿಗೆ ಮೊದಲ ಸ್ಥಾನ ಬಂದಿದೆ.

ಶಿಕ್ಷಣ ಹಾಗೂ ಕೃಷಿಯಲ್ಲಿ ಈ ಮೊದಲು ಮೊದಲ ರ‍್ಯಾಂಕ್ ಪಡೆದಿದ್ದ ಜಿಲ್ಲೆ ಜೂನ್ ತಿಂಗಳ ಸಮೀಕ್ಷೆಯಲ್ಲಿ ಸಮಗ್ರ ಸಾಧನೆಯಲ್ಲಿ 1ನೇ ರ್ಯಾಂಕ್ ಪಡೆದಿದೆ. ಕೇಂದ್ರ ಸರ್ಕಾರ ಹಾಗೂ ನೀತಿ ಆಯೋಗದಿಂದ ಹೆಚ್ಚುವರಿ ಅನುದಾನ ಪಡೆಯಲಿದೆ. ಜಿಲ್ಲೆ ಮೊದಲ ರ್ಯಾಂಕ್ ಪಡೆದಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಸಿಬ್ಬಂದಿ ಕಾರ್ಯವೈಖರಿ ಶ್ಲಾಘಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

14 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

23 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

24 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago