Advertisement
MIRROR FOCUS

ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೇ ಬ್ಯಾರಿಕೇಡ್‌ ಉತ್ತಮ | ಕೇರಳ ಸಚಿವರ ನೇತೃತ್ವದಲ್ಲಿ ಕ್ಯಾಂಪಾ ಹಣಕ್ಕಾಗಿ ಕೇಂದ್ರಕ್ಕೆ ನಿಯೋಗ

Share

ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನ. ಇದರ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ , ರಾಜ್ಯಕ್ಕೆ ಕೊಡಬೇಕಾದ ಕ್ಯಾಂಪಾ ನಿಧಿಯನ್ನೇ ನೀಡುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನಡೆದ ಸಚಿವರ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕ್ಯಾಂಪಾ ಹಣವನ್ನು ರೈಲ್ವೆ ಬ್ಯಾರಿಕೇಡ್ ಗೆ ಬಿಡುಗಡೆ ಮಾಡುವ ಕುರಿತಂತೆ ಇಂದು ಇಲ್ಲಿ ಪಾಲ್ಗೊಂಡಿರುವ ಎಲ್ಲ ಸಚಿವರೂ ಕೇಂದ್ರ ಹವಾಮಾನ ಬದಲಾವಣೆ, ಪರಿಸರ ಮತ್ತು ಅರಣ್ಯ ಸಚಿವರಿಗೆ ಮನವಿ ಸಲ್ಲಿಸೋಣ ಎಂಬ ಸಲಹೆ ನೀಡಿದರು.

ಆನೆ-ಮಾನವ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವರ ಮಟ್ಟದ ಸಭೆಯಲ್ಲಿ ಅರಣ್ಯ ಸಚಿವರುಗಳಾದ ಎಂ. ಮದಿವೇಂಧನ್ (ತಮಿಳುನಾಡು), ಸಸೀಂದ್ರನ್ (ಕೇರಳ), ಬೈದ್ಯಾನಾಥ್ ರಾಮ್ (ಜಾರ್ಖಂಡ್) ಮತ್ತು ಕೊಂಡ ಸುರೇಖಾ (ತೆಲಂಗಾಣ) ಮತ್ತು ಉನ್ನತ ಐ.ಎಫ್.ಎಸ್. ಅಧಿಕಾರಿಗಳು ಪಾಲ್ಗೊಂಡಿದ್ದರು. ಕೇರಳದ ಅರಣ್ಯ ಸಚಿವ ಎ.ಕೆ. ಸಸೀಂದ್ರನ್ ಈ ಉಪಕ್ರಮದ ನೇತೃತ್ವವನ್ನು ತಾವು ವಹಿಸುವುದಾಗಿ ಸ್ವಯಂ ಪ್ರೇರಿತವಾಗಿ ಪ್ರಕಟಿಸಿದರು. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಅರಣ್ಯ ಸಚಿವರನ್ನೂ ಕರೆದುಕೊಂಡು ದೆಹಲಿಗೆ ನಿಯೋಗ ತೆರಳುವ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ದಿನಾಂಕ ನಿಗದಿ ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದರು. ಸಭೆ ಸಮ್ಮತಿಸಿತು.

ಲಾಂಟನಾ ಮತ್ತು ಸನ್ನಾ ಸಮಸ್ಯೆ ಪರಿಹಾರಕ್ಕೆ ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಚರ್ಚೆ ಮಾಡಲಾಯ್ತು. ನಿರಂತರವಾಗಿ ಲಾಂಟನಾವನ್ನು ಮೂಲೋತ್ಪಾಟನೆ ಮಾಡುವುದೇ ಪರಿಹಾರ ಎಂದು ಅಭಿಪ್ರಾಯ ವ್ಯಕ್ತವಾಯಿತು. ಕೆಲವು ಆದಿವಾಸಿಗಳು ಲಾಂಟನಾದಿಂದ ಅಲಂಕಾರಿಕ ವಸ್ತು ಮತ್ತು ವನ್ಯಮೃಗಗಳ ಪ್ರತಿಕೃತಿ ನಿರ್ಮಾಣ ಮಾಡುತ್ತಿದ್ದು, ಅವರೇ ಸ್ವತಃ ಮುಂದೆ ಬಂದು ಲಾಂಟನಾ ಕಳೆ ತೆಗೆಯುವುದಾದರೆ ಅವರಿಗೆ ಅವಕಾಶ ಕೊಡುವ ಬಗ್ಗೆಯೂ ಚರ್ಚಿಸಲಾಯಿತು. ಆನೆ-ಮಾನವ ಸಂಘರ್ಷದಲ್ಲಿ ಮೃತಪಟ್ಟವರಿಗೆ ಮತ್ತು ಬೆಳೆ ನಷ್ಟಕ್ಕೊಳಗಾದವರಿಗೆ ನೀಡಲಾಗುತ್ತಿರುವ ಪರಿಹಾರ, ಆನೆಗಳು ನಾಡಿಗೆ ಬಾರದಂತೆ ತಡೆಯಲು ಯಾವ ಯಾವ ರಾಜ್ಯದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಈಶ್ವರ ಖಂಡ್ರೆ ಅವರು ಇತರ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 hour ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

5 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

9 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago