ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ ಹಾವಳಿ ತಪ್ಪಿಸಲು ರೈಲ್ವೆ ಬ್ಯಾರಿಕೇಡ್ ನಿರ್ಮಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದ್ದಾರೆ. ಶೃಂಗೇರಿ ತಾಲೂಕಿನ ಶೆಟ್ಟಿ ಕೊಪ್ಪ ಭದ್ರಾ ಕಾಲೊನಿಯಲ್ಲಿ ಕಾಡಾನೆಗಳು ದಾಳಿ ನಡೆಸಿದ ಕೃಷಿ ಭೂಮಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗದಲ್ಲಿ ಕಾಡಾನೆಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಮತ್ತು ಅರಣ್ಯ ಸಚಿವರಿಗೆ ಮಾಹಿತಿ ನೀಡಲಾಗಿದೆ ಎಂದರು. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ 20 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಶೀಘ್ರವಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel