Advertisement
MIRROR FOCUS

ಕಾಶ್ಮೀರಿ ಸೇಬುಗಳಿಗಾಗಿ ವಿಶೇಷ ಗೂಡ್ಸ್ ರೈಲು‌ | ರೈಲ್ವೆ ಸಚಿವರಿಂದ ಘೋಷಣೆ

Share

ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರ ಮಳೆ ಮತ್ತು ಆಗಾಗ್ಗೆ ಭೂಕುಸಿತದ ಕಾರಣದಿಂದ  ಹಣ್ಣು ಬೆಳೆಗಾರರಿಗೆ, ವಿಶೇಷವಾಗಿ ಅನಂತನಾಗ್ ಜಿಲ್ಲೆಯಲ್ಲಿ, ತಮ್ಮ ಉತ್ಪನ್ನಗಳನ್ನು ಸಾಗಿಸುವಲ್ಲಿ ತೀವ್ರ ತೊಂದರೆಗಳನ್ನುಂಟು ಮಾಡಿದವು. ರೈತರು ಭಾರೀ ನಷ್ಟದ ಅಪಾಯವನ್ನು ಎದುರಿಸುತ್ತಿರುವುದರಿಂದ ರೈಲ್ವೇ ಸಚಿವ ಅಶ್ವಿನ್‌ ವೈಷ್ಣವ್‌ ಅವರು ವಿಶೇಷ ರೈಲು ಓಡಾಟವನ್ನು ಘೋಷಿಸಿದ್ದಾರೆ.

ಭಾರೀ ಮಳೆಯ ಕಾರಣದಿಂದ ರಸ್ತೆಗಳು ಭೂಕುಸಿತಕ್ಕೆ ಒಳಗಾಗಿ ಬೆಳೆಯನ್ನು ಸಾಗಾಟ ಮಾಡಲು ಸಂಕಷ್ಟ ಪಡಬೇಕಾಯಿತು. ಹೀಗಾಗಿ ಬೆಳೆ ಬೆಳೆದರೂ ಸಾಗಾಟದ ಸಮಸ್ಯೆಯ ಕಾರಣದಿಂದ ನಷ್ಟ ಅನುಭವಿಸುವ ಸ್ಥಿತಿಗೆ ಒಳಗಾಗಬೇಕಾಯಿತು. ತಕ್ಷಣವೇ ಸ್ಥಳೀಯರು ಮತ್ತು ಬೆಳೆಗಾರರು ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವರಿಗೆ ತಕ್ಷಣ ನೆರವಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್, ಕಾಶ್ಮೀರಿ ಸೇಬುಗಳ ಸಾಗಣೆಗೆ ಮೀಸಲಾಗಿರುವ ವಿಶೇಷ ಗೂಡ್ಸ್ ರೈಲುಗಳ ಓಡಾಟದ ಬಗ್ಗೆ ಘೋಷಿಸಿದರು. ಈ ಕ್ರಮವು ದೇಶದ ವಿವಿಧ ಭಾಗಗಳಿಗೆ ಸೇಬುಗಳ ಸುರಕ್ಷಿತ, ಸಕಾಲಿಕ ಮತ್ತು ಸುಗಮ ಪೂರೈಕೆಗೆ ಅವಕಾಶವಾಗಿದೆ. ತೋಟಗಾರಿಕೆಯನ್ನು ಅವಲಂಬಿಸಿರುವ ಸಾವಿರಾರು ಕುಟುಂಬಗಳ ಈ ತಕ್ಷಣದ ನೆರವು ಪ್ರಯೋಜನವಾಗಿದೆ. ಹಣ್ಣು ಬೆಳೆಗಾರರು ಮತ್ತು ಸಾಮಾಜಿಕ ಕಾರ್ಯಕರ್ತರು ಈ ನಿರ್ಧಾರವನ್ನು ಸ್ವಾಗತಿಸಿದರು, ಸರ್ಕಾರ ಮತ್ತು ರೈಲ್ವೆ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

35 minutes ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

7 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

7 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

17 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

24 hours ago