ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರ ಮಳೆ ಮತ್ತು ಆಗಾಗ್ಗೆ ಭೂಕುಸಿತದ ಕಾರಣದಿಂದ ಹಣ್ಣು ಬೆಳೆಗಾರರಿಗೆ, ವಿಶೇಷವಾಗಿ ಅನಂತನಾಗ್ ಜಿಲ್ಲೆಯಲ್ಲಿ, ತಮ್ಮ ಉತ್ಪನ್ನಗಳನ್ನು ಸಾಗಿಸುವಲ್ಲಿ ತೀವ್ರ ತೊಂದರೆಗಳನ್ನುಂಟು ಮಾಡಿದವು. ರೈತರು ಭಾರೀ ನಷ್ಟದ ಅಪಾಯವನ್ನು ಎದುರಿಸುತ್ತಿರುವುದರಿಂದ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರು ವಿಶೇಷ ರೈಲು ಓಡಾಟವನ್ನು ಘೋಷಿಸಿದ್ದಾರೆ.
ಭಾರೀ ಮಳೆಯ ಕಾರಣದಿಂದ ರಸ್ತೆಗಳು ಭೂಕುಸಿತಕ್ಕೆ ಒಳಗಾಗಿ ಬೆಳೆಯನ್ನು ಸಾಗಾಟ ಮಾಡಲು ಸಂಕಷ್ಟ ಪಡಬೇಕಾಯಿತು. ಹೀಗಾಗಿ ಬೆಳೆ ಬೆಳೆದರೂ ಸಾಗಾಟದ ಸಮಸ್ಯೆಯ ಕಾರಣದಿಂದ ನಷ್ಟ ಅನುಭವಿಸುವ ಸ್ಥಿತಿಗೆ ಒಳಗಾಗಬೇಕಾಯಿತು. ತಕ್ಷಣವೇ ಸ್ಥಳೀಯರು ಮತ್ತು ಬೆಳೆಗಾರರು ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವರಿಗೆ ತಕ್ಷಣ ನೆರವಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್, ಕಾಶ್ಮೀರಿ ಸೇಬುಗಳ ಸಾಗಣೆಗೆ ಮೀಸಲಾಗಿರುವ ವಿಶೇಷ ಗೂಡ್ಸ್ ರೈಲುಗಳ ಓಡಾಟದ ಬಗ್ಗೆ ಘೋಷಿಸಿದರು. ಈ ಕ್ರಮವು ದೇಶದ ವಿವಿಧ ಭಾಗಗಳಿಗೆ ಸೇಬುಗಳ ಸುರಕ್ಷಿತ, ಸಕಾಲಿಕ ಮತ್ತು ಸುಗಮ ಪೂರೈಕೆಗೆ ಅವಕಾಶವಾಗಿದೆ. ತೋಟಗಾರಿಕೆಯನ್ನು ಅವಲಂಬಿಸಿರುವ ಸಾವಿರಾರು ಕುಟುಂಬಗಳ ಈ ತಕ್ಷಣದ ನೆರವು ಪ್ರಯೋಜನವಾಗಿದೆ. ಹಣ್ಣು ಬೆಳೆಗಾರರು ಮತ್ತು ಸಾಮಾಜಿಕ ಕಾರ್ಯಕರ್ತರು ಈ ನಿರ್ಧಾರವನ್ನು ಸ್ವಾಗತಿಸಿದರು, ಸರ್ಕಾರ ಮತ್ತು ರೈಲ್ವೆ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…