ಕೆಲ ಕಾಲಗಳಿಂದ ಸ್ಥಗಿತಗೊಂಡಿದ್ದ ರೈಲ್ವೆ ಸಂಚಾರದ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಸಜ್ಜಾಗಿದೆ. ರೈಲ್ವೆ ಸಂಚಾರದ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆಯೇ ಪ್ರಯಾಣಿಕರಿಗೆ ಸಹಾಯವಾಗುವಂತೆ ಬಸ್ ಸಂಚಾರದ ವ್ಯವಸ್ಥೆಯು ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಕೆಲವೇ ದಿನಗಳಲ್ಲಿ ಬರಲಿರುವ ಹಬ್ಬಗಳನ್ನು ಗಮನದಲ್ಲಿರಿಸಿಕೊಂಡು ವ್ಯವಸ್ಥೆಯನ್ನು ಆಯೋಜಿಸಲಾಗಿದೆ.
ಒಟ್ಟು 200 ರೈಲುಗಳ ಸಂಚಾರಕ್ಕೆ ಅನುಮತಿ ನೀಡಲು ರೈಲ್ವೆ ಇಲಾಖೆ ಈ ಹಿಂದೆ ಸಜ್ಜಾಗಿತ್ತು. ಅದರ ಪೂರ್ವಭಾಗದ ಸಿದ್ಧತೆಯಂತೆ 39 ವಿಶೇಷ ರೈಲುಗಳನ್ನು ಬಿಡುವಂತೆ ಇದೀಗ ಇಲಾಖೆ ಸೂಚಿಸಿದೆ. ಅಕ್ಟೋಬರ್ 15ರಿಂದ ಈ ವಿಶೇಷ ರೈಲು ಸಂಚಾರ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ.
ಈ ವಿಶೇಷ ರೈಲುಗಳು, ದೇಶದೆಲ್ಲೆಡೆ ಸಂಚಾರ ಮಾಡಲಿದ್ದು, ಇದರಲ್ಲಿ ಬಹುತೇಕ ರೈಲುಗಳು ಎಕ್ಸ್ಪ್ರೆಸ್ ರೈಲುಗಳು. ಇನ್ನು ಕರ್ನಾಟಕದಲ್ಲಿ 5 ರೈಲುಗಳನ್ನು ಬಿಡಲಾಗುತ್ತಿದ್ದು, ರೈಲುಗಳು 3 ವಾರಕ್ಕೊಮ್ಮೆ ಸಂಚಾರ ಮಾಡಲಿವೆ. ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಪ್ರತಿದಿನ ಸಂಚಾರ ಮಾಡಲಿದ್ದು, ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್ಪ್ರೆಸ್ ಮಂಗಳವಾರ ಒಂದು ದಿನ ಹೊರತುಪಡಿಸಿ ಉಳಿದ ದಿನ ಸಂಚರಿಸಲಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…