ಕೆಲ ಕಾಲಗಳಿಂದ ಸ್ಥಗಿತಗೊಂಡಿದ್ದ ರೈಲ್ವೆ ಸಂಚಾರದ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಸಜ್ಜಾಗಿದೆ. ರೈಲ್ವೆ ಸಂಚಾರದ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆಯೇ ಪ್ರಯಾಣಿಕರಿಗೆ ಸಹಾಯವಾಗುವಂತೆ ಬಸ್ ಸಂಚಾರದ ವ್ಯವಸ್ಥೆಯು ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಕೆಲವೇ ದಿನಗಳಲ್ಲಿ ಬರಲಿರುವ ಹಬ್ಬಗಳನ್ನು ಗಮನದಲ್ಲಿರಿಸಿಕೊಂಡು ವ್ಯವಸ್ಥೆಯನ್ನು ಆಯೋಜಿಸಲಾಗಿದೆ.
ಒಟ್ಟು 200 ರೈಲುಗಳ ಸಂಚಾರಕ್ಕೆ ಅನುಮತಿ ನೀಡಲು ರೈಲ್ವೆ ಇಲಾಖೆ ಈ ಹಿಂದೆ ಸಜ್ಜಾಗಿತ್ತು. ಅದರ ಪೂರ್ವಭಾಗದ ಸಿದ್ಧತೆಯಂತೆ 39 ವಿಶೇಷ ರೈಲುಗಳನ್ನು ಬಿಡುವಂತೆ ಇದೀಗ ಇಲಾಖೆ ಸೂಚಿಸಿದೆ. ಅಕ್ಟೋಬರ್ 15ರಿಂದ ಈ ವಿಶೇಷ ರೈಲು ಸಂಚಾರ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ.
ಈ ವಿಶೇಷ ರೈಲುಗಳು, ದೇಶದೆಲ್ಲೆಡೆ ಸಂಚಾರ ಮಾಡಲಿದ್ದು, ಇದರಲ್ಲಿ ಬಹುತೇಕ ರೈಲುಗಳು ಎಕ್ಸ್ಪ್ರೆಸ್ ರೈಲುಗಳು. ಇನ್ನು ಕರ್ನಾಟಕದಲ್ಲಿ 5 ರೈಲುಗಳನ್ನು ಬಿಡಲಾಗುತ್ತಿದ್ದು, ರೈಲುಗಳು 3 ವಾರಕ್ಕೊಮ್ಮೆ ಸಂಚಾರ ಮಾಡಲಿವೆ. ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಪ್ರತಿದಿನ ಸಂಚಾರ ಮಾಡಲಿದ್ದು, ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್ಪ್ರೆಸ್ ಮಂಗಳವಾರ ಒಂದು ದಿನ ಹೊರತುಪಡಿಸಿ ಉಳಿದ ದಿನ ಸಂಚರಿಸಲಿದೆ.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…