ಕೆಲ ಕಾಲಗಳಿಂದ ಸ್ಥಗಿತಗೊಂಡಿದ್ದ ರೈಲ್ವೆ ಸಂಚಾರದ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಸಜ್ಜಾಗಿದೆ. ರೈಲ್ವೆ ಸಂಚಾರದ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆಯೇ ಪ್ರಯಾಣಿಕರಿಗೆ ಸಹಾಯವಾಗುವಂತೆ ಬಸ್ ಸಂಚಾರದ ವ್ಯವಸ್ಥೆಯು ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಕೆಲವೇ ದಿನಗಳಲ್ಲಿ ಬರಲಿರುವ ಹಬ್ಬಗಳನ್ನು ಗಮನದಲ್ಲಿರಿಸಿಕೊಂಡು ವ್ಯವಸ್ಥೆಯನ್ನು ಆಯೋಜಿಸಲಾಗಿದೆ.
ಒಟ್ಟು 200 ರೈಲುಗಳ ಸಂಚಾರಕ್ಕೆ ಅನುಮತಿ ನೀಡಲು ರೈಲ್ವೆ ಇಲಾಖೆ ಈ ಹಿಂದೆ ಸಜ್ಜಾಗಿತ್ತು. ಅದರ ಪೂರ್ವಭಾಗದ ಸಿದ್ಧತೆಯಂತೆ 39 ವಿಶೇಷ ರೈಲುಗಳನ್ನು ಬಿಡುವಂತೆ ಇದೀಗ ಇಲಾಖೆ ಸೂಚಿಸಿದೆ. ಅಕ್ಟೋಬರ್ 15ರಿಂದ ಈ ವಿಶೇಷ ರೈಲು ಸಂಚಾರ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ.
ಈ ವಿಶೇಷ ರೈಲುಗಳು, ದೇಶದೆಲ್ಲೆಡೆ ಸಂಚಾರ ಮಾಡಲಿದ್ದು, ಇದರಲ್ಲಿ ಬಹುತೇಕ ರೈಲುಗಳು ಎಕ್ಸ್ಪ್ರೆಸ್ ರೈಲುಗಳು. ಇನ್ನು ಕರ್ನಾಟಕದಲ್ಲಿ 5 ರೈಲುಗಳನ್ನು ಬಿಡಲಾಗುತ್ತಿದ್ದು, ರೈಲುಗಳು 3 ವಾರಕ್ಕೊಮ್ಮೆ ಸಂಚಾರ ಮಾಡಲಿವೆ. ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಪ್ರತಿದಿನ ಸಂಚಾರ ಮಾಡಲಿದ್ದು, ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್ಪ್ರೆಸ್ ಮಂಗಳವಾರ ಒಂದು ದಿನ ಹೊರತುಪಡಿಸಿ ಉಳಿದ ದಿನ ಸಂಚರಿಸಲಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…