ಕೆಲ ಕಾಲಗಳಿಂದ ಸ್ಥಗಿತಗೊಂಡಿದ್ದ ರೈಲ್ವೆ ಸಂಚಾರದ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಸಜ್ಜಾಗಿದೆ. ರೈಲ್ವೆ ಸಂಚಾರದ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆಯೇ ಪ್ರಯಾಣಿಕರಿಗೆ ಸಹಾಯವಾಗುವಂತೆ ಬಸ್ ಸಂಚಾರದ ವ್ಯವಸ್ಥೆಯು ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಕೆಲವೇ ದಿನಗಳಲ್ಲಿ ಬರಲಿರುವ ಹಬ್ಬಗಳನ್ನು ಗಮನದಲ್ಲಿರಿಸಿಕೊಂಡು ವ್ಯವಸ್ಥೆಯನ್ನು ಆಯೋಜಿಸಲಾಗಿದೆ.
ಒಟ್ಟು 200 ರೈಲುಗಳ ಸಂಚಾರಕ್ಕೆ ಅನುಮತಿ ನೀಡಲು ರೈಲ್ವೆ ಇಲಾಖೆ ಈ ಹಿಂದೆ ಸಜ್ಜಾಗಿತ್ತು. ಅದರ ಪೂರ್ವಭಾಗದ ಸಿದ್ಧತೆಯಂತೆ 39 ವಿಶೇಷ ರೈಲುಗಳನ್ನು ಬಿಡುವಂತೆ ಇದೀಗ ಇಲಾಖೆ ಸೂಚಿಸಿದೆ. ಅಕ್ಟೋಬರ್ 15ರಿಂದ ಈ ವಿಶೇಷ ರೈಲು ಸಂಚಾರ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ.
ಈ ವಿಶೇಷ ರೈಲುಗಳು, ದೇಶದೆಲ್ಲೆಡೆ ಸಂಚಾರ ಮಾಡಲಿದ್ದು, ಇದರಲ್ಲಿ ಬಹುತೇಕ ರೈಲುಗಳು ಎಕ್ಸ್ಪ್ರೆಸ್ ರೈಲುಗಳು. ಇನ್ನು ಕರ್ನಾಟಕದಲ್ಲಿ 5 ರೈಲುಗಳನ್ನು ಬಿಡಲಾಗುತ್ತಿದ್ದು, ರೈಲುಗಳು 3 ವಾರಕ್ಕೊಮ್ಮೆ ಸಂಚಾರ ಮಾಡಲಿವೆ. ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಪ್ರತಿದಿನ ಸಂಚಾರ ಮಾಡಲಿದ್ದು, ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್ಪ್ರೆಸ್ ಮಂಗಳವಾರ ಒಂದು ದಿನ ಹೊರತುಪಡಿಸಿ ಉಳಿದ ದಿನ ಸಂಚರಿಸಲಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…