ಕೆಲ ಕಾಲಗಳಿಂದ ಸ್ಥಗಿತಗೊಂಡಿದ್ದ ರೈಲ್ವೆ ಸಂಚಾರದ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಸಜ್ಜಾಗಿದೆ. ರೈಲ್ವೆ ಸಂಚಾರದ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆಯೇ ಪ್ರಯಾಣಿಕರಿಗೆ ಸಹಾಯವಾಗುವಂತೆ ಬಸ್ ಸಂಚಾರದ ವ್ಯವಸ್ಥೆಯು ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಕೆಲವೇ ದಿನಗಳಲ್ಲಿ ಬರಲಿರುವ ಹಬ್ಬಗಳನ್ನು ಗಮನದಲ್ಲಿರಿಸಿಕೊಂಡು ವ್ಯವಸ್ಥೆಯನ್ನು ಆಯೋಜಿಸಲಾಗಿದೆ.
ಒಟ್ಟು 200 ರೈಲುಗಳ ಸಂಚಾರಕ್ಕೆ ಅನುಮತಿ ನೀಡಲು ರೈಲ್ವೆ ಇಲಾಖೆ ಈ ಹಿಂದೆ ಸಜ್ಜಾಗಿತ್ತು. ಅದರ ಪೂರ್ವಭಾಗದ ಸಿದ್ಧತೆಯಂತೆ 39 ವಿಶೇಷ ರೈಲುಗಳನ್ನು ಬಿಡುವಂತೆ ಇದೀಗ ಇಲಾಖೆ ಸೂಚಿಸಿದೆ. ಅಕ್ಟೋಬರ್ 15ರಿಂದ ಈ ವಿಶೇಷ ರೈಲು ಸಂಚಾರ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ.
ಈ ವಿಶೇಷ ರೈಲುಗಳು, ದೇಶದೆಲ್ಲೆಡೆ ಸಂಚಾರ ಮಾಡಲಿದ್ದು, ಇದರಲ್ಲಿ ಬಹುತೇಕ ರೈಲುಗಳು ಎಕ್ಸ್ಪ್ರೆಸ್ ರೈಲುಗಳು. ಇನ್ನು ಕರ್ನಾಟಕದಲ್ಲಿ 5 ರೈಲುಗಳನ್ನು ಬಿಡಲಾಗುತ್ತಿದ್ದು, ರೈಲುಗಳು 3 ವಾರಕ್ಕೊಮ್ಮೆ ಸಂಚಾರ ಮಾಡಲಿವೆ. ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಪ್ರತಿದಿನ ಸಂಚಾರ ಮಾಡಲಿದ್ದು, ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್ಪ್ರೆಸ್ ಮಂಗಳವಾರ ಒಂದು ದಿನ ಹೊರತುಪಡಿಸಿ ಉಳಿದ ದಿನ ಸಂಚರಿಸಲಿದೆ.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…