ಭಾರತೀಯ ರೈಲ್ವೇಯನ್ನು ಆಧುನಿಕ, ಸುರಕ್ಷಿತ ಮತ್ತು ಅನುಕೂಲಕರವಾಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದ ಥಾಣೆ ಮತ್ತು ದಿವಾವನ್ನು ಸಂಪರ್ಕಿಸುವ ಎರಡು ಹೆಚ್ಚುವರಿ ರೈಲು ಮಾರ್ಗಗಳನ್ನು ಉದ್ಘಾಟಿಸಿದರು. ಅವರು ಮುಂಬೈ ಉಪನಗರ ರೈಲ್ವೆಯ ಎರಡು ಉಪನಗರ ರೈಲುಗಳಿಗೆ ಪ್ಲ್ಯಾಗ್ ಆಫ್ ಮಾಡಿದರು.
ರೈಲ್ವೆಯನ್ನು ಆಧುನಿಕ ಸುರಕ್ಷಿತ ಮತ್ತು ಅನುಕೂಲಕರವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಕೋವಿಡ್ ಕೂಡ ಈ ಕಾರಣಕ್ಕಾಗಿ ನಮ್ಮ ಬದ್ಧತೆಯಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ. ಈ ಯೋಜನೆಯು ಮುಂಬೈನ ಸಾಮರ್ಥ್ಯವನ್ನು ಮತ್ತು ಕನಸಿನ ನಗರ ಎಂಬ ಗುರುತನ್ನು ಬಲಪಡಿಸುತ್ತದೆ. ಮಾತ್ರವ್ಲ ಇಂದು 6,000 ಕ್ಕೂ ಹೆಚ್ಚು ರೈಲು ನಿಲ್ದಾಣಗಳು ವೈ-ಫೈ ಸೌಲಭ್ಯದೊಂದಿಗೆ ಸಂಪರ್ಕ ಹೊಂದಿದೆ. ವಂದೇ ಭಾರತ್ ರೈಲುಗಳು ವೇಗ ಮತ್ತು ಆಧುನಿಕ ಸೌಕರ್ಯವನ್ನು ನೀಡುತ್ತಿದೆ. ಮುಂಬರುವ ವರ್ಷಗಳಲ್ಲಿ 400 ಹೊಸ ವಂದೇ ಭಾರತ್ ರೈಲುಗಳು ದೇಶಕ್ಕೆ ಸೇವೆ ಸಲ್ಲಿಸಲು ಪ್ರಾರಂಭಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…