Advertisement
ವೆದರ್ ಮಿರರ್

ಒಮ್ಮೆಲೇ ಸುರಿದ ಭಾರೀ ಮಳೆ | ಮಡಪ್ಪಾಡಿಯಲ್ಲಿ ಒಂದು ಗಂಟೆಯಲ್ಲಿ 140 ಮಿಮೀ ಮಳೆ…! |

Share

ಸೋಮವಾರ ಮಧ್ಯಾಹ್ನದ ಬಳಿಕ ಒಮ್ಮೆಲೇ ಗುಡುಗು ಸಹಿತ ಭಾರೀ ಮಳೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸುರಿಯಿತು. ಅದರಲ್ಲೂ ಸುಳ್ಯ ತಾಲೂಕಿನ ಸಂಪಾಜೆ, ಅರಂತೋಡು ಸೇರಿದಂತೆ ಮಡಪ್ಪಾಡಿ ಮೊದಲಾದ ಕಡೆ ಭಾರೀ ಮಳೆಯಾಗಿದೆ. ಮಡಪ್ಪಾಡಿಯಲ್ಲಿ  ಒಂದು ಗಂಟೆಯಲ್ಲಿ  140 ಮಿಮೀ ಮಳೆಯಾಗಿದೆ.

ಸುಳ್ಯದ ಹಲವು ಕಡೆಗಳಲ್ಲಿ  ಭಾರೀ ಮಳೆಯಾಗಿದೆ. ಮಡಪ್ಪಾಡಿಯಲ್ಲಿ ಇಂದು ಮಧ್ಯಾಹ್ನ ಸುರಿದ ಕುಂಭದ್ರೋಣ ಮಳೆ 140 ಮಿಮೀ ಒಂದು ಗಂಟೆಯಲ್ಲಿ ದಾಖಲಾಗಿದೆ ಎಂದು ಮಡಪ್ಪಾಡಿಯ ಎಂ ಡಿ ವಿಜಯಕುಮಾರ್‌ ಮಾಹಿತಿ ಹಂಚಿಕೊಂಡಿದ್ದಾರೆ. ಮಳೆ ಮಾಹಿತಿ  ವ್ಯಾಟ್ಸಪ್ ಗುಂಪಿನಲ್ಲಿ ಈ ಮಾಹಿತಿ ಹಂಚಿಕೊಂಡಿರುವ ವಿಜಯ ಕುಮಾರ್‌ ಅವರು  ಸುಮಾರು ಎರಡು ದಶಕಗಳಿಂದ ಈ ರೀತಿಯಾಗಿ ಮಳೆ ಬಂದಿರಲಿಲ್ಲ ಎಂದು ಹೇಳಿದ್ದಾರೆ.‌ ಉಳಿದಂತೆ ಹಲವು ಕಡೆಗಳಲ್ಲಿ  ಉತ್ತಮ ಮಳೆಯಾದ ಬಗ್ಗೆ ವರದಿಯಾಗಿದೆ.

ಇಂದಿನ ಮಳೆಯ ಬಗ್ಗೆ ಕೃಷಿಕ ಸುರೇಶ್ಚಂದ್ರ ಕಲ್ಮಡ್ಕ ಹೀಗೆ ಬರೆದಿದ್ದಾರೆ…

ಅಬ್ಬಬ್ಬಾ..
ಈ ಪ್ರಕೃತಿಯೇ.. ಏನು ಶಕ್ತಿ, ಏನು ಯುಕ್ತಿ….ಉಫ್..

ಮೊನ್ನೆ ತಾನೇ ಸಾರ್ವೋದ್ಧಾರ ಸುರಿದ ಮಳೆ ನಿನ್ನೆ ಸಂಪೂರ್ಣ ವಿಶ್ರಾಂತಿ.ನಿನ್ನೆಯಿಡೀ ವರುಣ ದೇವ ತಣ್ಣಗೆ ಗುಡಿಹೊದ್ದು ಮಲಗಿದ್ದ. ರಾತ್ರಿ ದೂರದೂರದಲ್ಲಿ ವರುಣನ ಇರುವಿಕೆಯ ಬೆಳಕಿನ ಕೋಲ್ಮಿಂಚು ಕಾಣಬರುತ್ತಿದ್ದರೂ ನಮ್ಮೂರಲ್ಲಿ ರಾತ್ರಿಯಿಂದ ವಾತಾವರಣ ಬದಲಾದಂತೆ ಶುಷ್ಕ …ಹೊದ್ದು ಮಲಗುವಂತೆ ಸಣ್ಣಗೆ ಚಳಿ ಚಳಿ….ಮುಂಜಾನೆಯ ಸ್ವಾಗತವೇ ಸೂರ್ಯದೇವನ ಬಂಗಾರಮಯ ವರ್ಣದ ಕಿರಣದ ಓಕುಳಿಯಿಂದ…  ಆಹಾ…ಪ್ರಶಾಂತ ವಾತಾವರಣ…. ಮರಗಿಡಗಳೆಲ್ಲಾ….ಚಿನ್ನದ ಲೇಪನವೋ ಎಂಬಂತೆ ಅಲಂಕರಿಸಲ್ಪಟ್ಟಿದ್ದವು.

ವಾವ್… ಹಟ್ಟಿಯಿಂದ ದನ ಕರುಗಳ ಅಂಬಾ ಅಂಬಾ ಎಂಬ ಕರೆಯೋಲೆ, ಹಕ್ಕಿಗಳ ಚಿಲಿಪಿಲಿ, ಗೂಡಿನಿಂದ ಆಹಾರ ಅರಸಿ ಮರಬಳ್ಳಿಗಳೆಡೆಗೆ ನಾಗಾಲೋಟ, ಜೇನು ನೊಣಗಳ ಮಕರಂದ ಅರಸುವಿಕೆಯ ಝೇಂಕಾರ ನಾದ, ಮನೆಯ ಶ್ವಾನಗಳ ಅವಸರದ ಓಟ….ಪುನಃ ಓಡೋಡಿ ಬಂದು ಅಂಗಳದ ಹುಲ್ಲ ಮೇಲೆ ಹೊರಳಿ ಮನೆಯೊಡತಿಯತ್ತ ಹೊಟ್ಟೆ ಹಸಿವಿನ ನೋಟ…..
ರವಿಯೇರಿದಂತೆಯೇ ಲವಲವಿಕೆಯ ಪ್ರಕೃತಿಯ ಸೊಬಗು…..

ಅಂತೆಯೇ…. ಬಾನೆತ್ತರಕ್ಕೇರುತ್ತಾ ಕಠಿಣನಾದ ರವಿ ,ತೀಕ್ಷ್ಣನಾಗುತ್ತಾ ಸಾಗಿದ….ಇವನ ತೀಕ್ಣತೆಗೆ ಮದ್ದು ಅರೆಯುವ ಚಾಕಚಕ್ಯತೆ ಪ್ರಕೃತಿಗೆ ಕೋಟಿ ಕೋಟಿ ವರ್ಷಗಳ ಸಲೀಸು….ರವಿ ತನ್ನ ಕಿರಣಗಳಾಘಾತದಿಂದ ಆಕಾಶದೆತ್ತರಕೆ ಸೆಳೆದ ನೀರಾವಿಯನ್ನು ಪ್ರಕೃತಿ ಮಾತೆ ತನ್ನ ಅಡುಗೆ ಮನೆಯಲ್ಲಿ ಘನೀಕರಿಸಿ ಮುಗಿಲಾಗಿಸಿ ವಾಯುದೇವನ ಒಳಹೊರಗಣ ಒತ್ತಡಕ್ಕೆ ಜರ್ಝರಿತನಾಗಿಸಿ ಪುನಃ ಭೂರಮೆಯ ಒಡಲಾಳಕ್ಕೆ ಸಿಂಚನಗೊಳಿಸಿದಾಗ, ತೊರೆ ನದಿಗಳಾಗಿ ಜೀವಜಲದೂಟೆಯಾಗಿ ಒಂದು ಆವೃತ್ತಿ ಸಂಪೂರ್ಣವಾದಾಗ ರವಿ ತನ್ನ ತೀಕ್ಷ್ಣತೆ ಕಳಕೊಂಡಿದ್ದ…….

ಅಂತೆಯೇ.. ಈ ಜೀವನ ಚಕ್ರವೂ ಅಷ್ಟೇ ಅಲ್ವೇ… ಹುಟ್ಟಿನಿಂದಾರಭ್ಯ ಮೊಳೆತು ಚಿಗಿತು ಪುಟಿದೆದ್ದು…ಕಂಪನ್ನರಸುತ್ತಾ ಜೊತೆಯಾಗಿ ಹಾರಾಡಿ,ತೇಲಾಡಿ, ಒತ್ತಡ …ಮಥನಗಳಾಗಿ..ತೀಕ್ಷ್ಣನಾಗಿ….ಹದವಾಗಿ..ತಂಪಾಗಿ…..ಕೊನೆಗೊಂದು ದಿನ ಭೂತಾಯ ಮಡಿಲೊಳಗೊಂದಾಗಿ ಹರಿದು ಹುಪ್ಪಟೆಯಾಗಿ ಇಲ್ಲದಾಗಿ, ಮರೆಯಾಗಿ, ಇನ್ನೆಲ್ಲೋ ಪುನಶ್ಚೇತನವಾಗಿ ಪ್ರಕೃತಿ ಮಾತೆಯ ಸುಳಿಯೊಳಗೊಂದಾಗುವುದು ಈ ಜಗದ ನಿಯಮ. ಅಷ್ಟೇ. ಕುವೆಂಪು ಅವರೆಂದಂತೆ..

ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ
ನಿತ್ಯವೂ ಅವತರಿಪ ಸತ್ಯಾವತಾರ
ಮಣ್ಣಾಗಿ ಮರವಾಗಿ ಮಿಗವಾಗಿ ಖಗವಾಗಿ
ಭವ ಭವದಿ ಭವಿಸಿ ಹೇ ಭವವಿದೂರ
ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ..
ಅವತರಿಸು ಬಾ ಇಲ್ಲಿ ಇಂದೆನ್ನ ಚೈತ್ಯದಲಿ
ಹೇ ದಿವ್ಯ ಸಚ್ಚಿದಾನಂದ ಶೀಲಾ..
ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

23 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

24 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago