Advertisement
ಸುದ್ದಿಗಳು

ಹೆಚ್ಚಿದ ಮಳೆಯಬ್ಬರ | ಕೇರಳ-ತಮಿಳುನಾಡಿನಲ್ಲಿ ಭಾರೀ ಮಳೆ | 24 ಗಂಟೆಗಳಲ್ಲಿ ಸರಾಸರಿ 109.53 ಮಿಮೀ ಮಳೆ |

Share

ಕೇರಳ ಹಾಗೂ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಸದ್ಯ ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದ್ದರೆ ಕೇರಳದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು,  ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ (24 ಗಂಟೆಗಳಲ್ಲಿ 20 ಸೆಂ.ಮೀ.ಗಿಂತ ಹೆಚ್ಚು), ಕರಾವಳಿ ಕರ್ನಾಟಕದಲ್ಲೂ ಭಾರೀ ಮಳೆ ಸಾಧ್ಯತೆ ಇದೆ  ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement
Advertisement

ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ರೆಡ್ ಅಲರ್ಟ್‌ನಲ್ಲಿದ್ದರೆ, ಇತರ ಎಂಟು ಜಿಲ್ಲೆಗಳಾದ – ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು (11-20 ಸೆಂ.ಮೀ) ಆರೆಂಜ್ ಅಲರ್ಟ್‌ ಫೋಷಣೆ ಮಾಡಲಾಗಿದೆ. ತಮಿಳುನಾಡು, ಪುದುಚೇರಿ ಮತ್ತು ಕೇರಳ, ಮಾಹೆ,  ಕರಾವಳಿ ಕರ್ನಾಟಕ  ಭಾರೀ ಮಳೆ ಸಾಧ್ಯತೆ ಪ್ರದೇಶಗಳು.

 

ಕನ್ಯಾಕುಮಾರಿಯಲ್ಲಿ ಸತತ ಮೂರನೇ ದಿನವೂ ಭಾರಿ ಮಳೆಯಾಗುತ್ತಿದ್ದು, ಭಾನುವಾರ ಬೆಳಗ್ಗೆ 8 ಗಂಟೆವರೆಗಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 109.53 ಮಿಮೀ ಮಳೆ ದಾಖಲಾಗಿದೆ. ಜಿಲ್ಲೆಯ 14 ಸ್ಥಳಗಳಲ್ಲಿ 100 ಮಿ.ಮೀ ಗಿಂತ ಹೆಚ್ಚು ಮಳೆ ದಾಖಲಾಗಿದ್ದು, ಮೂರು ಸ್ಥಳಗಳಲ್ಲಿ ತಲಾ 210 ಮಿ.ಮೀ. ಭಾನುವಾರ ಬೆಳಗಿನ ಜಾವದವರೆಗೆ 72 ಗುಡಿಸಲುಗಳು ಹಾನಿಗೊಳಗಾಗಿದ್ದು, 3,200ಕ್ಕೂ ಹೆಚ್ಚು ಜನರನ್ನು ಜಲಾವೃತ ಪ್ರದೇಶಗಳಿಂದ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. 3,000 ಕ್ಕೂ ಹೆಚ್ಚು ಜನರು ಇನ್ನೂ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭಾರೀ ಮಳೆಯಿಂದಾಗಿ ಕೇರಳ ರಾಜ್ಯದ ವಿವಿಧ ಅಣೆಕಟ್ಟುಗಳಲ್ಲಿ ನೀರಿನ ಮಟ್ಟವು ರೆಡ್ ಅಲರ್ಟ್ ಮಾರ್ಕ್‌ಗೆ ಏರಿದ್ದು, ಇಡುಕ್ಕಿ ಜಲಾಶಯದ  ಅಣೆಕಟ್ಟಿನ ಒಂದು ಶಟರ್ ಅನ್ನು ತೆರೆಯಲು ಅಧಿಕಾರಿಗಳು ತಿಳಿಸಿದ್ದಾರೆ.

ಈಗಿನ ಹವಾಮಾನ ವರದಿ ಪ್ರಕಾರ  ದಕ್ಷಿಣ ಕೇರಳ ಮತ್ತು ತಮಿಳುನಾಡಿನಲ್ಲಿ ಭಾನುವಾರ ಮತ್ತು ಸೋಮವಾರದಂದು ಕೇರಳದ ಮೇಲೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

 

ಅಂಡಮಾನ್ ಸಮುದ್ರದ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತ ಬಲಗೊಂಡಿದ್ದು  ಇದರ ಕಾರಣದಿಂದ ಕೇರಳ ಮತ್ತು ದಕ್ಷಿಣ ತಮಿಳುನಾಡಿನಲ್ಲಿ ಮಳೆಯ ಪ್ರಮಾಣವು ಮುಂದುವರಿದು ನಂತರ ಕಡಿಮೆಯಾಗುವ ಸಾಧ್ಯತೆಯಿದೆ. ಇದರ ಪರಿಣಾಮವಾಗಿ ಕರಾವಳಿ ಕರ್ನಾಟಕದ ಕಾಸರಗೋಡು ಭಾಗದಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

18 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago