Advertisement
ಸುದ್ದಿಗಳು

ಹೆಚ್ಚಿದ ಮಳೆಯಬ್ಬರ | ಕೇರಳ-ತಮಿಳುನಾಡಿನಲ್ಲಿ ಭಾರೀ ಮಳೆ | 24 ಗಂಟೆಗಳಲ್ಲಿ ಸರಾಸರಿ 109.53 ಮಿಮೀ ಮಳೆ |

Share

ಕೇರಳ ಹಾಗೂ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಸದ್ಯ ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದ್ದರೆ ಕೇರಳದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು,  ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ (24 ಗಂಟೆಗಳಲ್ಲಿ 20 ಸೆಂ.ಮೀ.ಗಿಂತ ಹೆಚ್ಚು), ಕರಾವಳಿ ಕರ್ನಾಟಕದಲ್ಲೂ ಭಾರೀ ಮಳೆ ಸಾಧ್ಯತೆ ಇದೆ  ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ರೆಡ್ ಅಲರ್ಟ್‌ನಲ್ಲಿದ್ದರೆ, ಇತರ ಎಂಟು ಜಿಲ್ಲೆಗಳಾದ – ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು (11-20 ಸೆಂ.ಮೀ) ಆರೆಂಜ್ ಅಲರ್ಟ್‌ ಫೋಷಣೆ ಮಾಡಲಾಗಿದೆ. ತಮಿಳುನಾಡು, ಪುದುಚೇರಿ ಮತ್ತು ಕೇರಳ, ಮಾಹೆ,  ಕರಾವಳಿ ಕರ್ನಾಟಕ  ಭಾರೀ ಮಳೆ ಸಾಧ್ಯತೆ ಪ್ರದೇಶಗಳು.

 

ಕನ್ಯಾಕುಮಾರಿಯಲ್ಲಿ ಸತತ ಮೂರನೇ ದಿನವೂ ಭಾರಿ ಮಳೆಯಾಗುತ್ತಿದ್ದು, ಭಾನುವಾರ ಬೆಳಗ್ಗೆ 8 ಗಂಟೆವರೆಗಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 109.53 ಮಿಮೀ ಮಳೆ ದಾಖಲಾಗಿದೆ. ಜಿಲ್ಲೆಯ 14 ಸ್ಥಳಗಳಲ್ಲಿ 100 ಮಿ.ಮೀ ಗಿಂತ ಹೆಚ್ಚು ಮಳೆ ದಾಖಲಾಗಿದ್ದು, ಮೂರು ಸ್ಥಳಗಳಲ್ಲಿ ತಲಾ 210 ಮಿ.ಮೀ. ಭಾನುವಾರ ಬೆಳಗಿನ ಜಾವದವರೆಗೆ 72 ಗುಡಿಸಲುಗಳು ಹಾನಿಗೊಳಗಾಗಿದ್ದು, 3,200ಕ್ಕೂ ಹೆಚ್ಚು ಜನರನ್ನು ಜಲಾವೃತ ಪ್ರದೇಶಗಳಿಂದ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. 3,000 ಕ್ಕೂ ಹೆಚ್ಚು ಜನರು ಇನ್ನೂ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭಾರೀ ಮಳೆಯಿಂದಾಗಿ ಕೇರಳ ರಾಜ್ಯದ ವಿವಿಧ ಅಣೆಕಟ್ಟುಗಳಲ್ಲಿ ನೀರಿನ ಮಟ್ಟವು ರೆಡ್ ಅಲರ್ಟ್ ಮಾರ್ಕ್‌ಗೆ ಏರಿದ್ದು, ಇಡುಕ್ಕಿ ಜಲಾಶಯದ  ಅಣೆಕಟ್ಟಿನ ಒಂದು ಶಟರ್ ಅನ್ನು ತೆರೆಯಲು ಅಧಿಕಾರಿಗಳು ತಿಳಿಸಿದ್ದಾರೆ.

ಈಗಿನ ಹವಾಮಾನ ವರದಿ ಪ್ರಕಾರ  ದಕ್ಷಿಣ ಕೇರಳ ಮತ್ತು ತಮಿಳುನಾಡಿನಲ್ಲಿ ಭಾನುವಾರ ಮತ್ತು ಸೋಮವಾರದಂದು ಕೇರಳದ ಮೇಲೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

 

ಅಂಡಮಾನ್ ಸಮುದ್ರದ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತ ಬಲಗೊಂಡಿದ್ದು  ಇದರ ಕಾರಣದಿಂದ ಕೇರಳ ಮತ್ತು ದಕ್ಷಿಣ ತಮಿಳುನಾಡಿನಲ್ಲಿ ಮಳೆಯ ಪ್ರಮಾಣವು ಮುಂದುವರಿದು ನಂತರ ಕಡಿಮೆಯಾಗುವ ಸಾಧ್ಯತೆಯಿದೆ. ಇದರ ಪರಿಣಾಮವಾಗಿ ಕರಾವಳಿ ಕರ್ನಾಟಕದ ಕಾಸರಗೋಡು ಭಾಗದಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

6 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

16 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

23 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

23 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago