Advertisement
ಅನುಕ್ರಮ

ವಾರೆ ವ್ಹಾ…..| ಸುಬ್ಬಪ್ಪನ ರಥೋತ್ಸವದೊಂದಿಗೆ ಮುಗಿಲ ತೇರಿನ ಕೊನೆಯ ದಿನಗಳು… ! |

Share

ಮುಗಿಲ ಮಾರಿಗೆ ರಾಗರತಿಯಾ..
ಮುಗಿಲ ಮಾರಿಗೆ ರಾಗರತಿಯಾ..
ನಂಜ ಏರಿತ್ತಾ…ಆಗ ಸಂಜೇ ಆಗಿತ್ತಾ
ಆಗ ಸಂಜೇ ಆಗಿತ್ತಾ…
ನೆಲದ ಅಂಚಿಗೆ ಮಂಜಿನ ಮುಸುಕೂ
ಹ್ಯಾಂಗೊ ಬಿದ್ದಿತ್ತಾ , ಗಾಳಿಗೆ ಮೇಲಕ್ಕೆದ್ದಿತ್ತಾ..
ಗಾಳಿಗೆ ಮೇಲಕ್ಕೆದ್ದಿತ್ತಾ….
ಮುಗಿಲ ಮಾರಿಗೇ ರಾಗ ರತಿಯಾ..
ನಂಜ ಏರಿತ್ತಾ…ಆಗ ಸಂಜೇ ಆಗಿತ್ತಾ…..

Advertisement
Advertisement

ವಾವ್……  ದ.ರಾ. ಬೇಂದ್ರೆಯವರು ತಮ್ಮ “ರಾಗರತಿ” ಗೀತೆಯಲ್ಲಿ ಪ್ರಕೃತಿಯ ಸೊಬಗು ಮತ್ತು ಬಾವ ವಿಕಾರದ ವರ್ಣನೆಯನ್ನು ಅದ್ಬುತವಾಗಿ ಸೆರೆ ಹಿಡಿದಿದ್ದಾರೆ.

ಹೌದಲ್ಲಾ….. ವಿಶೇಷವಾಗಿ ಮೂಡಣದ ಊರಿಗೆ ಸುಬ್ಬಪ್ಪನ ರಥೋತ್ಸವದೊಂದಿಗೆ ಮುಗಿಲ ತೇರಿನ ಕೊನೆಯ ದಿನಗಳೂ ಹೌದು. ದೈವಿಕ ನಿಯಮವೋ, ಪ್ರಾಕೃತಿಕ ಘಟನೆಯೋ…ಸುಬ್ರಹ್ಮಣ್ಯ ಷಷ್ಠೀ ನಮ್ಮೂರಿಗೆ ಮಳೆಯ ಕೊನೆಯ ದಿನಗಳ ಸೂಚಕ.(ಪ್ರಕೃತಿ ಮತ್ತು ದೈವಿಕ ಎರಡೂ ಒಂದೇ) ಅದರಂತೆಯೇ ಸುಬ್ಬಪ್ಪ, ನಿನ್ನೆ ಷಷ್ಠೀ ಉತ್ಸವ ಸಂಭ್ರಮಿಸಿ‌ ಗರ್ಭಗುಡಿ ಸೇರಿದ ನಂತರ ವರುಣ ತನ್ನ ಕರ್ತವ್ಯ ನಿರ್ವಹಣೆಗೆ ಹಾಜರಾಗೇಬಿಟ್ಟ.ಯಾರ ಪ್ರಚೋದನೆಯೋ, ಯಾವ ನಿಯಮವೋ ಸುಬ್ಬಪ್ಪನ ರಥೋತ್ಸವದ ಸಮಾಪನ ವರುಣನಿಗೆ ಹೇಗೆ ಗೊತ್ತಾಯಿತೋ…ಉತ್ಸವದ ಸಂಧರ್ಬ ಘಟಿಸಿರಬಹುದಾದ ಮಾನುಷ ಸಹಜ ಕೊಳೆಯನ್ನು ತೊಳೆದೇ ಬಿಟ್ಟ. ….ಯಬ್ಬ..

ಎತ್ತಣ ಮಾಮರ
ಎತ್ತಣ ಕೋಗಿಲೆ ,
ಎತ್ತಣೆತ್ತಿಂದ ಸಂಭಂದವಯ್ಯಾ..
ಬೆಟ್ಟದಾ ನೆಲ್ಲಿಕಾಯಿ
ಸಮುದ್ರದೊಳಗಣ ಉಪ್ಪು
ಎತ್ತಣೆತ್ತಿಂದ ಸಂಬಂಧವಯ್ಯಾ…..

ಈ ಎತ್ತಣೆತ್ತಿನ ಸಂಭಂಧವೇ ನಾವೆಲ್ಲಾ ದೇವರೂ,ಪ್ರಕೃತಿ, ಶಕ್ತಿ ಎಂದು ನಂಬೋದಲ್ಲವೇ…ಈ ಸೂಕ್ಷ್ಮಗಳ ಅರಿಯುದರಲ್ಲೇ ,ಅರಿತು ನಡೆಯುವುದರಲ್ಲೇ ನಿಜ ಜೀವನೋತ್ಸಾಹ ಇರೋದು…

ಅದನ್ನೇ ದ.ರಾ ಬೇಂದ್ರೆಯವರು….. ಮಾನವನೂ ರಾಗವೆಂಬ ಮುಗಿಲು ರತಿಯಾಗಿ ಮನವೆಂಬ ನೆಲದಂಚಿಗೆ ಮಂಜಿನಂತೆ ಮುಸುಕಾಗಿ ಆವರಿಸಿ ಬಿದ್ದಾಗ ತನಗೆ ಅರಿಯದೇ ಹೊಸ ಜೀವ ಚೈತನ್ಯವೊಂದು ಹೊರ ಸೂಸುವುದರನ್ನು ಬಹಳ ಚೆನ್ನಾಗಿ ವರ್ಣಿಸಿದ್ದಾರೆ….

ಧೀಯೋಯೋನಃ ಪ್ರಚೋದಯಾತ್…. ಎಂದಷ್ಟೇ ನಮ್ಮ ಪ್ರಾರ್ಥನೆ.

# ಟಿ ಆರ್‌ ಸುರೇಶ್ಚಂದ್ರ ಕಲ್ಮಡ್ಕ

( ಮುಗಿಲ ಮಾರಿಗೆ ರಾಗರತಿಯಾ….. ಹಾಡು ಇಲ್ಲಿದೆ…..)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

4 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago