Advertisement
ಅನುಕ್ರಮ

ವಾರೆ ವ್ಹಾ…..| ಸುಬ್ಬಪ್ಪನ ರಥೋತ್ಸವದೊಂದಿಗೆ ಮುಗಿಲ ತೇರಿನ ಕೊನೆಯ ದಿನಗಳು… ! |

Share

ಮುಗಿಲ ಮಾರಿಗೆ ರಾಗರತಿಯಾ..
ಮುಗಿಲ ಮಾರಿಗೆ ರಾಗರತಿಯಾ..
ನಂಜ ಏರಿತ್ತಾ…ಆಗ ಸಂಜೇ ಆಗಿತ್ತಾ
ಆಗ ಸಂಜೇ ಆಗಿತ್ತಾ…
ನೆಲದ ಅಂಚಿಗೆ ಮಂಜಿನ ಮುಸುಕೂ
ಹ್ಯಾಂಗೊ ಬಿದ್ದಿತ್ತಾ , ಗಾಳಿಗೆ ಮೇಲಕ್ಕೆದ್ದಿತ್ತಾ..
ಗಾಳಿಗೆ ಮೇಲಕ್ಕೆದ್ದಿತ್ತಾ….
ಮುಗಿಲ ಮಾರಿಗೇ ರಾಗ ರತಿಯಾ..
ನಂಜ ಏರಿತ್ತಾ…ಆಗ ಸಂಜೇ ಆಗಿತ್ತಾ…..

ವಾವ್……  ದ.ರಾ. ಬೇಂದ್ರೆಯವರು ತಮ್ಮ “ರಾಗರತಿ” ಗೀತೆಯಲ್ಲಿ ಪ್ರಕೃತಿಯ ಸೊಬಗು ಮತ್ತು ಬಾವ ವಿಕಾರದ ವರ್ಣನೆಯನ್ನು ಅದ್ಬುತವಾಗಿ ಸೆರೆ ಹಿಡಿದಿದ್ದಾರೆ.

ಹೌದಲ್ಲಾ….. ವಿಶೇಷವಾಗಿ ಮೂಡಣದ ಊರಿಗೆ ಸುಬ್ಬಪ್ಪನ ರಥೋತ್ಸವದೊಂದಿಗೆ ಮುಗಿಲ ತೇರಿನ ಕೊನೆಯ ದಿನಗಳೂ ಹೌದು. ದೈವಿಕ ನಿಯಮವೋ, ಪ್ರಾಕೃತಿಕ ಘಟನೆಯೋ…ಸುಬ್ರಹ್ಮಣ್ಯ ಷಷ್ಠೀ ನಮ್ಮೂರಿಗೆ ಮಳೆಯ ಕೊನೆಯ ದಿನಗಳ ಸೂಚಕ.(ಪ್ರಕೃತಿ ಮತ್ತು ದೈವಿಕ ಎರಡೂ ಒಂದೇ) ಅದರಂತೆಯೇ ಸುಬ್ಬಪ್ಪ, ನಿನ್ನೆ ಷಷ್ಠೀ ಉತ್ಸವ ಸಂಭ್ರಮಿಸಿ‌ ಗರ್ಭಗುಡಿ ಸೇರಿದ ನಂತರ ವರುಣ ತನ್ನ ಕರ್ತವ್ಯ ನಿರ್ವಹಣೆಗೆ ಹಾಜರಾಗೇಬಿಟ್ಟ.ಯಾರ ಪ್ರಚೋದನೆಯೋ, ಯಾವ ನಿಯಮವೋ ಸುಬ್ಬಪ್ಪನ ರಥೋತ್ಸವದ ಸಮಾಪನ ವರುಣನಿಗೆ ಹೇಗೆ ಗೊತ್ತಾಯಿತೋ…ಉತ್ಸವದ ಸಂಧರ್ಬ ಘಟಿಸಿರಬಹುದಾದ ಮಾನುಷ ಸಹಜ ಕೊಳೆಯನ್ನು ತೊಳೆದೇ ಬಿಟ್ಟ. ….ಯಬ್ಬ..

ಎತ್ತಣ ಮಾಮರ
ಎತ್ತಣ ಕೋಗಿಲೆ ,
ಎತ್ತಣೆತ್ತಿಂದ ಸಂಭಂದವಯ್ಯಾ..
ಬೆಟ್ಟದಾ ನೆಲ್ಲಿಕಾಯಿ
ಸಮುದ್ರದೊಳಗಣ ಉಪ್ಪು
ಎತ್ತಣೆತ್ತಿಂದ ಸಂಬಂಧವಯ್ಯಾ…..

ಈ ಎತ್ತಣೆತ್ತಿನ ಸಂಭಂಧವೇ ನಾವೆಲ್ಲಾ ದೇವರೂ,ಪ್ರಕೃತಿ, ಶಕ್ತಿ ಎಂದು ನಂಬೋದಲ್ಲವೇ…ಈ ಸೂಕ್ಷ್ಮಗಳ ಅರಿಯುದರಲ್ಲೇ ,ಅರಿತು ನಡೆಯುವುದರಲ್ಲೇ ನಿಜ ಜೀವನೋತ್ಸಾಹ ಇರೋದು…

ಅದನ್ನೇ ದ.ರಾ ಬೇಂದ್ರೆಯವರು….. ಮಾನವನೂ ರಾಗವೆಂಬ ಮುಗಿಲು ರತಿಯಾಗಿ ಮನವೆಂಬ ನೆಲದಂಚಿಗೆ ಮಂಜಿನಂತೆ ಮುಸುಕಾಗಿ ಆವರಿಸಿ ಬಿದ್ದಾಗ ತನಗೆ ಅರಿಯದೇ ಹೊಸ ಜೀವ ಚೈತನ್ಯವೊಂದು ಹೊರ ಸೂಸುವುದರನ್ನು ಬಹಳ ಚೆನ್ನಾಗಿ ವರ್ಣಿಸಿದ್ದಾರೆ….

ಧೀಯೋಯೋನಃ ಪ್ರಚೋದಯಾತ್…. ಎಂದಷ್ಟೇ ನಮ್ಮ ಪ್ರಾರ್ಥನೆ.

# ಟಿ ಆರ್‌ ಸುರೇಶ್ಚಂದ್ರ ಕಲ್ಮಡ್ಕ

( ಮುಗಿಲ ಮಾರಿಗೆ ರಾಗರತಿಯಾ….. ಹಾಡು ಇಲ್ಲಿದೆ…..)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 hour ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

3 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

3 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

12 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

14 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

22 hours ago