Advertisement
ಅನುಕ್ರಮ

ವಾರೆ ವ್ಹಾ…..| ಸುಬ್ಬಪ್ಪನ ರಥೋತ್ಸವದೊಂದಿಗೆ ಮುಗಿಲ ತೇರಿನ ಕೊನೆಯ ದಿನಗಳು… ! |

Share

ಮುಗಿಲ ಮಾರಿಗೆ ರಾಗರತಿಯಾ..
ಮುಗಿಲ ಮಾರಿಗೆ ರಾಗರತಿಯಾ..
ನಂಜ ಏರಿತ್ತಾ…ಆಗ ಸಂಜೇ ಆಗಿತ್ತಾ
ಆಗ ಸಂಜೇ ಆಗಿತ್ತಾ…
ನೆಲದ ಅಂಚಿಗೆ ಮಂಜಿನ ಮುಸುಕೂ
ಹ್ಯಾಂಗೊ ಬಿದ್ದಿತ್ತಾ , ಗಾಳಿಗೆ ಮೇಲಕ್ಕೆದ್ದಿತ್ತಾ..
ಗಾಳಿಗೆ ಮೇಲಕ್ಕೆದ್ದಿತ್ತಾ….
ಮುಗಿಲ ಮಾರಿಗೇ ರಾಗ ರತಿಯಾ..
ನಂಜ ಏರಿತ್ತಾ…ಆಗ ಸಂಜೇ ಆಗಿತ್ತಾ…..

ವಾವ್……  ದ.ರಾ. ಬೇಂದ್ರೆಯವರು ತಮ್ಮ “ರಾಗರತಿ” ಗೀತೆಯಲ್ಲಿ ಪ್ರಕೃತಿಯ ಸೊಬಗು ಮತ್ತು ಬಾವ ವಿಕಾರದ ವರ್ಣನೆಯನ್ನು ಅದ್ಬುತವಾಗಿ ಸೆರೆ ಹಿಡಿದಿದ್ದಾರೆ.

ಹೌದಲ್ಲಾ….. ವಿಶೇಷವಾಗಿ ಮೂಡಣದ ಊರಿಗೆ ಸುಬ್ಬಪ್ಪನ ರಥೋತ್ಸವದೊಂದಿಗೆ ಮುಗಿಲ ತೇರಿನ ಕೊನೆಯ ದಿನಗಳೂ ಹೌದು. ದೈವಿಕ ನಿಯಮವೋ, ಪ್ರಾಕೃತಿಕ ಘಟನೆಯೋ…ಸುಬ್ರಹ್ಮಣ್ಯ ಷಷ್ಠೀ ನಮ್ಮೂರಿಗೆ ಮಳೆಯ ಕೊನೆಯ ದಿನಗಳ ಸೂಚಕ.(ಪ್ರಕೃತಿ ಮತ್ತು ದೈವಿಕ ಎರಡೂ ಒಂದೇ) ಅದರಂತೆಯೇ ಸುಬ್ಬಪ್ಪ, ನಿನ್ನೆ ಷಷ್ಠೀ ಉತ್ಸವ ಸಂಭ್ರಮಿಸಿ‌ ಗರ್ಭಗುಡಿ ಸೇರಿದ ನಂತರ ವರುಣ ತನ್ನ ಕರ್ತವ್ಯ ನಿರ್ವಹಣೆಗೆ ಹಾಜರಾಗೇಬಿಟ್ಟ.ಯಾರ ಪ್ರಚೋದನೆಯೋ, ಯಾವ ನಿಯಮವೋ ಸುಬ್ಬಪ್ಪನ ರಥೋತ್ಸವದ ಸಮಾಪನ ವರುಣನಿಗೆ ಹೇಗೆ ಗೊತ್ತಾಯಿತೋ…ಉತ್ಸವದ ಸಂಧರ್ಬ ಘಟಿಸಿರಬಹುದಾದ ಮಾನುಷ ಸಹಜ ಕೊಳೆಯನ್ನು ತೊಳೆದೇ ಬಿಟ್ಟ. ….ಯಬ್ಬ..

ಎತ್ತಣ ಮಾಮರ
ಎತ್ತಣ ಕೋಗಿಲೆ ,
ಎತ್ತಣೆತ್ತಿಂದ ಸಂಭಂದವಯ್ಯಾ..
ಬೆಟ್ಟದಾ ನೆಲ್ಲಿಕಾಯಿ
ಸಮುದ್ರದೊಳಗಣ ಉಪ್ಪು
ಎತ್ತಣೆತ್ತಿಂದ ಸಂಬಂಧವಯ್ಯಾ…..

ಈ ಎತ್ತಣೆತ್ತಿನ ಸಂಭಂಧವೇ ನಾವೆಲ್ಲಾ ದೇವರೂ,ಪ್ರಕೃತಿ, ಶಕ್ತಿ ಎಂದು ನಂಬೋದಲ್ಲವೇ…ಈ ಸೂಕ್ಷ್ಮಗಳ ಅರಿಯುದರಲ್ಲೇ ,ಅರಿತು ನಡೆಯುವುದರಲ್ಲೇ ನಿಜ ಜೀವನೋತ್ಸಾಹ ಇರೋದು…

ಅದನ್ನೇ ದ.ರಾ ಬೇಂದ್ರೆಯವರು….. ಮಾನವನೂ ರಾಗವೆಂಬ ಮುಗಿಲು ರತಿಯಾಗಿ ಮನವೆಂಬ ನೆಲದಂಚಿಗೆ ಮಂಜಿನಂತೆ ಮುಸುಕಾಗಿ ಆವರಿಸಿ ಬಿದ್ದಾಗ ತನಗೆ ಅರಿಯದೇ ಹೊಸ ಜೀವ ಚೈತನ್ಯವೊಂದು ಹೊರ ಸೂಸುವುದರನ್ನು ಬಹಳ ಚೆನ್ನಾಗಿ ವರ್ಣಿಸಿದ್ದಾರೆ….

ಧೀಯೋಯೋನಃ ಪ್ರಚೋದಯಾತ್…. ಎಂದಷ್ಟೇ ನಮ್ಮ ಪ್ರಾರ್ಥನೆ.

# ಟಿ ಆರ್‌ ಸುರೇಶ್ಚಂದ್ರ ಕಲ್ಮಡ್ಕ

( ಮುಗಿಲ ಮಾರಿಗೆ ರಾಗರತಿಯಾ….. ಹಾಡು ಇಲ್ಲಿದೆ…..)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

21 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago