ಮುಗಿಲ ಮಾರಿಗೆ ರಾಗರತಿಯಾ..
ಮುಗಿಲ ಮಾರಿಗೆ ರಾಗರತಿಯಾ..
ನಂಜ ಏರಿತ್ತಾ…ಆಗ ಸಂಜೇ ಆಗಿತ್ತಾ
ಆಗ ಸಂಜೇ ಆಗಿತ್ತಾ…
ನೆಲದ ಅಂಚಿಗೆ ಮಂಜಿನ ಮುಸುಕೂ
ಹ್ಯಾಂಗೊ ಬಿದ್ದಿತ್ತಾ , ಗಾಳಿಗೆ ಮೇಲಕ್ಕೆದ್ದಿತ್ತಾ..
ಗಾಳಿಗೆ ಮೇಲಕ್ಕೆದ್ದಿತ್ತಾ….
ಮುಗಿಲ ಮಾರಿಗೇ ರಾಗ ರತಿಯಾ..
ನಂಜ ಏರಿತ್ತಾ…ಆಗ ಸಂಜೇ ಆಗಿತ್ತಾ…..
ವಾವ್…… ದ.ರಾ. ಬೇಂದ್ರೆಯವರು ತಮ್ಮ “ರಾಗರತಿ” ಗೀತೆಯಲ್ಲಿ ಪ್ರಕೃತಿಯ ಸೊಬಗು ಮತ್ತು ಬಾವ ವಿಕಾರದ ವರ್ಣನೆಯನ್ನು ಅದ್ಬುತವಾಗಿ ಸೆರೆ ಹಿಡಿದಿದ್ದಾರೆ.
ಹೌದಲ್ಲಾ….. ವಿಶೇಷವಾಗಿ ಮೂಡಣದ ಊರಿಗೆ ಸುಬ್ಬಪ್ಪನ ರಥೋತ್ಸವದೊಂದಿಗೆ ಮುಗಿಲ ತೇರಿನ ಕೊನೆಯ ದಿನಗಳೂ ಹೌದು. ದೈವಿಕ ನಿಯಮವೋ, ಪ್ರಾಕೃತಿಕ ಘಟನೆಯೋ…ಸುಬ್ರಹ್ಮಣ್ಯ ಷಷ್ಠೀ ನಮ್ಮೂರಿಗೆ ಮಳೆಯ ಕೊನೆಯ ದಿನಗಳ ಸೂಚಕ.(ಪ್ರಕೃತಿ ಮತ್ತು ದೈವಿಕ ಎರಡೂ ಒಂದೇ) ಅದರಂತೆಯೇ ಸುಬ್ಬಪ್ಪ, ನಿನ್ನೆ ಷಷ್ಠೀ ಉತ್ಸವ ಸಂಭ್ರಮಿಸಿ ಗರ್ಭಗುಡಿ ಸೇರಿದ ನಂತರ ವರುಣ ತನ್ನ ಕರ್ತವ್ಯ ನಿರ್ವಹಣೆಗೆ ಹಾಜರಾಗೇಬಿಟ್ಟ.ಯಾರ ಪ್ರಚೋದನೆಯೋ, ಯಾವ ನಿಯಮವೋ ಸುಬ್ಬಪ್ಪನ ರಥೋತ್ಸವದ ಸಮಾಪನ ವರುಣನಿಗೆ ಹೇಗೆ ಗೊತ್ತಾಯಿತೋ…ಉತ್ಸವದ ಸಂಧರ್ಬ ಘಟಿಸಿರಬಹುದಾದ ಮಾನುಷ ಸಹಜ ಕೊಳೆಯನ್ನು ತೊಳೆದೇ ಬಿಟ್ಟ. ….ಯಬ್ಬ..ಎತ್ತಣ ಮಾಮರ
ಎತ್ತಣ ಕೋಗಿಲೆ ,
ಎತ್ತಣೆತ್ತಿಂದ ಸಂಭಂದವಯ್ಯಾ..
ಬೆಟ್ಟದಾ ನೆಲ್ಲಿಕಾಯಿ
ಸಮುದ್ರದೊಳಗಣ ಉಪ್ಪು
ಎತ್ತಣೆತ್ತಿಂದ ಸಂಬಂಧವಯ್ಯಾ…..
ಈ ಎತ್ತಣೆತ್ತಿನ ಸಂಭಂಧವೇ ನಾವೆಲ್ಲಾ ದೇವರೂ,ಪ್ರಕೃತಿ, ಶಕ್ತಿ ಎಂದು ನಂಬೋದಲ್ಲವೇ…ಈ ಸೂಕ್ಷ್ಮಗಳ ಅರಿಯುದರಲ್ಲೇ ,ಅರಿತು ನಡೆಯುವುದರಲ್ಲೇ ನಿಜ ಜೀವನೋತ್ಸಾಹ ಇರೋದು…
ಅದನ್ನೇ ದ.ರಾ ಬೇಂದ್ರೆಯವರು….. ಮಾನವನೂ ರಾಗವೆಂಬ ಮುಗಿಲು ರತಿಯಾಗಿ ಮನವೆಂಬ ನೆಲದಂಚಿಗೆ ಮಂಜಿನಂತೆ ಮುಸುಕಾಗಿ ಆವರಿಸಿ ಬಿದ್ದಾಗ ತನಗೆ ಅರಿಯದೇ ಹೊಸ ಜೀವ ಚೈತನ್ಯವೊಂದು ಹೊರ ಸೂಸುವುದರನ್ನು ಬಹಳ ಚೆನ್ನಾಗಿ ವರ್ಣಿಸಿದ್ದಾರೆ….
ಧೀಯೋಯೋನಃ ಪ್ರಚೋದಯಾತ್…. ಎಂದಷ್ಟೇ ನಮ್ಮ ಪ್ರಾರ್ಥನೆ.
# ಟಿ ಆರ್ ಸುರೇಶ್ಚಂದ್ರ ಕಲ್ಮಡ್ಕ
( ಮುಗಿಲ ಮಾರಿಗೆ ರಾಗರತಿಯಾ….. ಹಾಡು ಇಲ್ಲಿದೆ…..)
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…