ಶನಿವಾರ ಸಂಜೆ ಸುರಿದ ಮಳೆಗೆ ಸುಳ್ಯ ತಾಲೂಕಿನ ವಿವಿದೆಡೆ ರಸ್ತೆಗಳಿಗೆ ಹಾನಿಯಾಗಿದೆ. ಗುಡ್ಡ- ಬರೆ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಸಂಜೆ ವೇಳೆಗೆ ಭಾರೀ ಮಳೆಯಾಗುತ್ತಿದೆ.
ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಕರಿಕಳ ಎಂಬಲ್ಲಿ ಮಳೆಯ ಕಾರಣದಿಂದ ಬರೆ ಕುಸಿತವಾಗಿದೆ. ಇದರಿಂದ ರಸ್ತೆಗೆ ಹಾನಿಯಾಗಿದ್ದು ಚರಂಡಿ ಮುಚ್ಚಿದೆ. ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯ ನಡೆದಿದೆ. ನೂತನವಾಗಿ ನಿರ್ಮಿಸಿದ ವಿದ್ಯುತ್ ತಂತಿ ನೆಲಕಚ್ಚಿದೆ.
ಇದೇ ವೇಳೆ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ದುಗ್ಗಲಡ್ಕ ಬಳಿಯ ಕೊಯಿಕುಳಿ ಬಳಿಯೂ ಬರೆ ಕುಸಿತವಾಗಿದೆ, ಮರ ಅಪಾಯದ ಸ್ಥಿತಿಯಲ್ಲಿದೆ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…