ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭರ್ಜರಿ ಮಳೆ | ಸಿಡಿಲಿನ ಅಬ್ಬರ, ಗಾಳಿ ಮಳೆ | ರಾಜ್ಯದ ವಿವಿದೆಡೆ ಉತ್ತಮ ಮಳೆ |

April 13, 2022
7:49 PM

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಿಡಿಲು ಗಾಳಿ ಸಹಿತ ಮಳೆಯಾಗಿದೆ.

ಸುಳ್ಯ ತಾಲೂಕಿನ ಪಂಜ, ಕಲ್ಮಡ್ಕ, ಗುತ್ತಿಗಾರು, ಸುಳ್ಯ, ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ  ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲೂ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಸಿಡಿಲಿನ ಅಬ್ಬರ ಜೋರಾಗಿತ್ತು, ಉತ್ತಮ ಮಳೆಯಾಗಿದೆ.ಉಳಿದಂತೆ ಮಂಗಳೂರು, ಬಂಟ್ವಾಳ ಸೇರಿದಂತೆ ದಕ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಸಿಡಿಲಿಗೆ ತೆಂಗಿನ ಮರಕ್ಕೆ ಬೆಂಕಿ ತಗುಲಿದ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಬಳಿ ನಡೆದಿದೆ.ವಿಟ್ಲದಲ್ಲಿ ಭಾರೀ ಗಾಳಿ ಮಳೆಗೆ ಪಾರ್ಕಿಂಗ್‌ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲುಗಳ ರಾಶಿ ಕುಸಿದ ಹಲವು ವಾಹನಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ರಾಜ್ಯದ ಕೊಡಗು, ಮೈಸೂರು, ಕೆ ಆರ್‌ ಪೇಟೆ, ಬೆಂಗಳೂರಿನ ವಿವಿದೆಡೆ, ಚಿಕ್ಕಬಳ್ಳಾಪುರದ ಕೆಲವು ಕಡೆ, ಕುಣಿಗಲ್‌, ತುಮಕೂರು, ಪ್ರದೇಶದಲ್ಲೂ ಮಳೆಯಾದ ಬಗ್ಗೆ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ವಿವಿದೆಡೆಯೂ ಮಳೆಯಾದ ಬಗ್ಗೆ ವರದಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror