Advertisement
ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭರ್ಜರಿ ಮಳೆ | ಸಿಡಿಲಿನ ಅಬ್ಬರ, ಗಾಳಿ ಮಳೆ | ರಾಜ್ಯದ ವಿವಿದೆಡೆ ಉತ್ತಮ ಮಳೆ |

Share

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಿಡಿಲು ಗಾಳಿ ಸಹಿತ ಮಳೆಯಾಗಿದೆ.

ಸುಳ್ಯ ತಾಲೂಕಿನ ಪಂಜ, ಕಲ್ಮಡ್ಕ, ಗುತ್ತಿಗಾರು, ಸುಳ್ಯ, ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ  ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲೂ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಸಿಡಿಲಿನ ಅಬ್ಬರ ಜೋರಾಗಿತ್ತು, ಉತ್ತಮ ಮಳೆಯಾಗಿದೆ.ಉಳಿದಂತೆ ಮಂಗಳೂರು, ಬಂಟ್ವಾಳ ಸೇರಿದಂತೆ ದಕ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಸಿಡಿಲಿಗೆ ತೆಂಗಿನ ಮರಕ್ಕೆ ಬೆಂಕಿ ತಗುಲಿದ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಬಳಿ ನಡೆದಿದೆ.ವಿಟ್ಲದಲ್ಲಿ ಭಾರೀ ಗಾಳಿ ಮಳೆಗೆ ಪಾರ್ಕಿಂಗ್‌ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲುಗಳ ರಾಶಿ ಕುಸಿದ ಹಲವು ವಾಹನಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ರಾಜ್ಯದ ಕೊಡಗು, ಮೈಸೂರು, ಕೆ ಆರ್‌ ಪೇಟೆ, ಬೆಂಗಳೂರಿನ ವಿವಿದೆಡೆ, ಚಿಕ್ಕಬಳ್ಳಾಪುರದ ಕೆಲವು ಕಡೆ, ಕುಣಿಗಲ್‌, ತುಮಕೂರು, ಪ್ರದೇಶದಲ್ಲೂ ಮಳೆಯಾದ ಬಗ್ಗೆ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ವಿವಿದೆಡೆಯೂ ಮಳೆಯಾದ ಬಗ್ಗೆ ವರದಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

6 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago