ಮಳೆ… ಮಳೆ …| ಮಳೆ ಅಬ್ಬರಕ್ಕೆ ಶಾಲೆಗೆ ರಜೆ | ದಿನವಿಡೀ ಸುರಿದ ಮಳೆ ಹಲವು ಕಡೆ 100 ಮಿಮೀಗಿಂತಲೂ ಅಧಿಕ |

May 19, 2022
9:28 AM

ವಾಯುಭಾರ ಕುಸಿತ ಹಾಗೂ ಮುಂಗಾರು ಮಾರುತ ಪ್ರವೇಶದ ಆರಂಭದಲ್ಲಿ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಸುರಿಯುತ್ತಿದೆ. ಬುಧವಾರ ಇಡೀ ದಿನ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ 151 ಮಿಮೀ ದಾಖಲಾಗಿದೆ. ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆ ಸುರಿದಿದೆ. ಮುಂಜಾಗ್ರತಾ ಕ್ರಮವಾಗಿ ದಕ ಜಿಲ್ಲೆಯಲ್ಲಿ  ಗುರುವಾರ ಶಾಲೆಗೆ ರಜೆ ಘೋಷಿಸಲಾಗಿದೆ.

ದ ಕ ಜಿಲ್ಲೆಯಲ್ಲಿ  ನಿರಂತರ ಮಳೆಯ ಕಾರಣದಿಂದ  ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮೇ.19ರ ಗುರುವಾರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಳೆ ತೀವ್ರತೆ ಪಡೆದುಕೊಂಡಿದೆ.  ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಅಬ್ಬರ ಮುಂದುವರೆಯಲಿದೆ. ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ.

ಎಲ್ಲೆಲ್ಲಿ ಮಳೆ ಎಷ್ಟು ?

ಸುಬ್ರಹ್ಮಣ್ಯ 151 ಮಿಮೀ, ಚೆಂಬು 148 ಮಿಮೀ, ನೆಕ್ರಕಜೆ(ಕಾಸರಗೋಡು) 148 ಮಿಮೀ, ಕಲ್ಲಾಜೆ 143 ಮಿಮೀ, ಮಡಪ್ಪಾಡಿ 143 ಮಿಮೀ, ಬಳ್ಪ ಪಟೋಳಿ 125, ಗುತ್ತಿಗಾರು ಹಾಲೆಮಜಲು 124 ಮಿಮೀ, ದೊಡ್ಡತೋಟ 122 ಮಿಮೀ, ಬಳ್ಪ ಕೋಡಿಗದ್ದೆ 120 ಮಿಮೀ, ಎಣ್ಮೂರು 115 ಮಿಮೀ, ಕೇನ್ಯ 112 ಮಿಮೀ, ಕಮಿಲ 111 ಮಿಮೀ , ಕಲ್ಮಡ್ಕ 109 ಮಿಮೀ, ಸುಳ್ಯ 109 ಮಿಮೀ , ಅಯ್ಯನಕಟ್ಟೆ 105 ಮಿಮೀ, ಕರಿಕಳ 104 ಮಿಮೀ,ಕೊಲ್ಲಮೊಗ್ರ 99 ಮಿಮೀ, ಬೆಳ್ಳಾರೆ ಕಾವಿನಮೂಲೆ 93 ಮಿಮೀ, ಚೊಕ್ಕಾಡಿ 87 ಮಿಮೀ, ಬಜಗೋಳಿಯಲ್ಲಿ 79ಮಿಮೀ ,  ಮುರುಳ್ಯ 77 ಮಿಮೀ, ಕೋಡಿಂಬಾಳ 75ಮಿಮೀ,  ಉಡುಪಿ 75ಮಿಮೀ,  ಆರ್ಯಾಪು 67 ಮಿಮೀ, ಕೊಪ್ಪ ರಾಗೋಡು 67 ಮಿಮೀ, ಕಡಬ 64 ಮಿಮೀ, ನೆಲ್ಯಾಡಿ 63 ಮಿಮೀ, ಪಾಂಡೇಶ್ವರ 57 ಮಿಮೀ, ಕೊಳ್ತಿಗೆ 51 ಮಿಮೀ, ಪೆಲತ್ತಡ್ಕ 49 ಮಿಮೀ, ಅಡೆಂಜ ಉರುವಾಲು 43 ಮಿಮೀ, ಬಲ್ನಾಡು 40 ಮಿಮೀ, ಕೋಡಪದವು 40 ಮಿಮೀ, ಕೈರಂಗಳ 38 ಮಿಮೀ, ಬೆಳ್ತಂಗಡಿ ನಗರ 34 ಮಿಮೀ, ಮಳೆಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ
May 27, 2026
2:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ
May 27, 2026
12:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?
May 27, 2026
11:51 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror