MIRROR FOCUS

ಮಳೆ… ಮಳೆ …| ಮಳೆ ಅಬ್ಬರಕ್ಕೆ ಶಾಲೆಗೆ ರಜೆ | ದಿನವಿಡೀ ಸುರಿದ ಮಳೆ ಹಲವು ಕಡೆ 100 ಮಿಮೀಗಿಂತಲೂ ಅಧಿಕ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಾಯುಭಾರ ಕುಸಿತ ಹಾಗೂ ಮುಂಗಾರು ಮಾರುತ ಪ್ರವೇಶದ ಆರಂಭದಲ್ಲಿ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಸುರಿಯುತ್ತಿದೆ. ಬುಧವಾರ ಇಡೀ ದಿನ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ 151 ಮಿಮೀ ದಾಖಲಾಗಿದೆ. ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆ ಸುರಿದಿದೆ. ಮುಂಜಾಗ್ರತಾ ಕ್ರಮವಾಗಿ ದಕ ಜಿಲ್ಲೆಯಲ್ಲಿ  ಗುರುವಾರ ಶಾಲೆಗೆ ರಜೆ ಘೋಷಿಸಲಾಗಿದೆ.

Advertisement
Advertisement

ದ ಕ ಜಿಲ್ಲೆಯಲ್ಲಿ  ನಿರಂತರ ಮಳೆಯ ಕಾರಣದಿಂದ  ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮೇ.19ರ ಗುರುವಾರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಳೆ ತೀವ್ರತೆ ಪಡೆದುಕೊಂಡಿದೆ.  ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಅಬ್ಬರ ಮುಂದುವರೆಯಲಿದೆ. ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ.

ಎಲ್ಲೆಲ್ಲಿ ಮಳೆ ಎಷ್ಟು ?

ಸುಬ್ರಹ್ಮಣ್ಯ 151 ಮಿಮೀ, ಚೆಂಬು 148 ಮಿಮೀ, ನೆಕ್ರಕಜೆ(ಕಾಸರಗೋಡು) 148 ಮಿಮೀ, ಕಲ್ಲಾಜೆ 143 ಮಿಮೀ, ಮಡಪ್ಪಾಡಿ 143 ಮಿಮೀ, ಬಳ್ಪ ಪಟೋಳಿ 125, ಗುತ್ತಿಗಾರು ಹಾಲೆಮಜಲು 124 ಮಿಮೀ, ದೊಡ್ಡತೋಟ 122 ಮಿಮೀ, ಬಳ್ಪ ಕೋಡಿಗದ್ದೆ 120 ಮಿಮೀ, ಎಣ್ಮೂರು 115 ಮಿಮೀ, ಕೇನ್ಯ 112 ಮಿಮೀ, ಕಮಿಲ 111 ಮಿಮೀ , ಕಲ್ಮಡ್ಕ 109 ಮಿಮೀ, ಸುಳ್ಯ 109 ಮಿಮೀ , ಅಯ್ಯನಕಟ್ಟೆ 105 ಮಿಮೀ, ಕರಿಕಳ 104 ಮಿಮೀ,ಕೊಲ್ಲಮೊಗ್ರ 99 ಮಿಮೀ, ಬೆಳ್ಳಾರೆ ಕಾವಿನಮೂಲೆ 93 ಮಿಮೀ, ಚೊಕ್ಕಾಡಿ 87 ಮಿಮೀ, ಬಜಗೋಳಿಯಲ್ಲಿ 79ಮಿಮೀ ,  ಮುರುಳ್ಯ 77 ಮಿಮೀ, ಕೋಡಿಂಬಾಳ 75ಮಿಮೀ,  ಉಡುಪಿ 75ಮಿಮೀ,  ಆರ್ಯಾಪು 67 ಮಿಮೀ, ಕೊಪ್ಪ ರಾಗೋಡು 67 ಮಿಮೀ, ಕಡಬ 64 ಮಿಮೀ, ನೆಲ್ಯಾಡಿ 63 ಮಿಮೀ, ಪಾಂಡೇಶ್ವರ 57 ಮಿಮೀ, ಕೊಳ್ತಿಗೆ 51 ಮಿಮೀ, ಪೆಲತ್ತಡ್ಕ 49 ಮಿಮೀ, ಅಡೆಂಜ ಉರುವಾಲು 43 ಮಿಮೀ, ಬಲ್ನಾಡು 40 ಮಿಮೀ, ಕೋಡಪದವು 40 ಮಿಮೀ, ಕೈರಂಗಳ 38 ಮಿಮೀ, ಬೆಳ್ತಂಗಡಿ ನಗರ 34 ಮಿಮೀ, ಮಳೆಯಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…

1 hour ago

ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…

2 hours ago

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

12 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

12 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

13 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

13 hours ago