ಕರಾವಳಿ ಜಿಲ್ಲೆಯ ಹಲವೆಡೆ 100+ ಮಿಮೀ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್‌ ಎಲರ್ಟ್‌ |

July 6, 2022
9:35 AM
ಕಳೆದ 24 ಗಂಟೆಯಲ್ಲಿ ಸುಳ್ಯ ತಾಲೂಕು ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ‌ ಮಳೆಯಾಗಿದೆ. ನಿರಂತರ ಮಳೆ ಸುರಿಯುತ್ತಿದ್ದು ಹಲವು ಕಡೆಗಳಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಕೊಡಗು ಜಿಲ್ಲೆಯ ಚೆಂಬುವಿನಲ್ಲಿ 163 ಮಿಮೀ ಮಳೆ ದಾಖಲಾಗಿದೆ. ಉಳಿದಂತೆ ಹಲವು ಕಡೆ 100 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ ಮಾಡಲಾಗಿದ್ದು ಆರೆಂಜ್‌ ಎಲರ್ಟ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಕೊಡಗು ಜಿಲ್ಲೆಯ ಚೆಂಬುವಿನಲ್ಲಿ 163 ಮಿಮೀ ಮಳೆಯಾದರೆ ಮಡಪ್ಪಾಡಿ 140 ಮಿಮೀ, ಗುತ್ತಿಗಾರು 111 ಮಿಮೀ, ಕಮಿಲ 113 ಮಿಮೀ , ಬಾಳಿಲ 126 ಮಿಮೀ , ಕೊಲ್ಲಮೊಗ್ರ 101 ಮಿಮೀ, ಕಲ್ಮಡ್ಕ 124 ಮಿಮೀ,  ಬಳ್ಪ 139 ಮಿಮೀ, ಬಂಟ್ವಾಳ 92 ಮಿಮೀ, ಕಲ್ಲಾಜೆ 143 ಮಿಮೀ, ಮಂಗಳೂರು 51 ಮಿಮೀ, ಸುಬ್ರಹ್ಮಣ್ಯ 134 ಮಿಮೀ , ಬೆಳ್ತಂಗಡಿ 183  ಮಿಮೀ, ಕೊಪ್ಪ 103 ಮಿಮೀ, ಮಂಚಿ 105 ಮಿಮೀ,   ಕೋಡಪದವು 92 ಮಿಮೀ,  ಪುತ್ತೂರು ಮುಂಡೂರು 140 ಮಿಮೀ ಮಳೆಯಾಗಿದೆ.

ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ,  ಹಾಗೂ ಉತ್ತರಕನ್ನಡ, ಕೊಡಗು,  ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ನಿರೀಕ್ಷೆ ಮಾಡಲಾಗಿದೆ. ಹೀಗಾಗಿ ಹೈ ಎಲರ್ಟ್‌ ಹವಾಮಾನ ಇಲಾಖಾ ಸೂಚಿಸಿದೆ.  ಸತತ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಹೆಚ್ಚಾಗಿ ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮುನ್ನಚ್ಚೆರಿಕೆ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ 4 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಮಳೆ ಅವಾಂತರದಿಂದ ಹಾನಿಯಾಗಿದೆ. ಭಾರೀ ಮಳೆಗೆ ಸೋಮವಾರಪೇಟೆ ತಾಲೂಕಿನಲ್ಲಿ  ಮನೆಯೊಂದು ಬಿರುಕು ಬಿಟ್ಟಿದೆ. ಉತ್ತರಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಿಂದ ಹಾನಿಯಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror