ಸುದ್ದಿಗಳು

ಕರಾವಳಿ ಜಿಲ್ಲೆಯ ಹಲವೆಡೆ 100+ ಮಿಮೀ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್‌ ಎಲರ್ಟ್‌ |

Share
ಕಳೆದ 24 ಗಂಟೆಯಲ್ಲಿ ಸುಳ್ಯ ತಾಲೂಕು ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ‌ ಮಳೆಯಾಗಿದೆ. ನಿರಂತರ ಮಳೆ ಸುರಿಯುತ್ತಿದ್ದು ಹಲವು ಕಡೆಗಳಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಕೊಡಗು ಜಿಲ್ಲೆಯ ಚೆಂಬುವಿನಲ್ಲಿ 163 ಮಿಮೀ ಮಳೆ ದಾಖಲಾಗಿದೆ. ಉಳಿದಂತೆ ಹಲವು ಕಡೆ 100 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ ಮಾಡಲಾಗಿದ್ದು ಆರೆಂಜ್‌ ಎಲರ್ಟ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಕೊಡಗು ಜಿಲ್ಲೆಯ ಚೆಂಬುವಿನಲ್ಲಿ 163 ಮಿಮೀ ಮಳೆಯಾದರೆ ಮಡಪ್ಪಾಡಿ 140 ಮಿಮೀ, ಗುತ್ತಿಗಾರು 111 ಮಿಮೀ, ಕಮಿಲ 113 ಮಿಮೀ , ಬಾಳಿಲ 126 ಮಿಮೀ , ಕೊಲ್ಲಮೊಗ್ರ 101 ಮಿಮೀ, ಕಲ್ಮಡ್ಕ 124 ಮಿಮೀ,  ಬಳ್ಪ 139 ಮಿಮೀ, ಬಂಟ್ವಾಳ 92 ಮಿಮೀ, ಕಲ್ಲಾಜೆ 143 ಮಿಮೀ, ಮಂಗಳೂರು 51 ಮಿಮೀ, ಸುಬ್ರಹ್ಮಣ್ಯ 134 ಮಿಮೀ , ಬೆಳ್ತಂಗಡಿ 183  ಮಿಮೀ, ಕೊಪ್ಪ 103 ಮಿಮೀ, ಮಂಚಿ 105 ಮಿಮೀ,   ಕೋಡಪದವು 92 ಮಿಮೀ,  ಪುತ್ತೂರು ಮುಂಡೂರು 140 ಮಿಮೀ ಮಳೆಯಾಗಿದೆ.

Advertisement
Advertisement
ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ,  ಹಾಗೂ ಉತ್ತರಕನ್ನಡ, ಕೊಡಗು,  ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ನಿರೀಕ್ಷೆ ಮಾಡಲಾಗಿದೆ. ಹೀಗಾಗಿ ಹೈ ಎಲರ್ಟ್‌ ಹವಾಮಾನ ಇಲಾಖಾ ಸೂಚಿಸಿದೆ.  ಸತತ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಹೆಚ್ಚಾಗಿ ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮುನ್ನಚ್ಚೆರಿಕೆ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ 4 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಮಳೆ ಅವಾಂತರದಿಂದ ಹಾನಿಯಾಗಿದೆ. ಭಾರೀ ಮಳೆಗೆ ಸೋಮವಾರಪೇಟೆ ತಾಲೂಕಿನಲ್ಲಿ  ಮನೆಯೊಂದು ಬಿರುಕು ಬಿಟ್ಟಿದೆ. ಉತ್ತರಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಿಂದ ಹಾನಿಯಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

17 hours ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

20 hours ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

24 hours ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

24 hours ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

24 hours ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

2 days ago