Advertisement
ಸುದ್ದಿಗಳು

ಕರಾವಳಿ ಜಿಲ್ಲೆಯ ಹಲವೆಡೆ 100+ ಮಿಮೀ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್‌ ಎಲರ್ಟ್‌ |

Share
ಕಳೆದ 24 ಗಂಟೆಯಲ್ಲಿ ಸುಳ್ಯ ತಾಲೂಕು ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ‌ ಮಳೆಯಾಗಿದೆ. ನಿರಂತರ ಮಳೆ ಸುರಿಯುತ್ತಿದ್ದು ಹಲವು ಕಡೆಗಳಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಕೊಡಗು ಜಿಲ್ಲೆಯ ಚೆಂಬುವಿನಲ್ಲಿ 163 ಮಿಮೀ ಮಳೆ ದಾಖಲಾಗಿದೆ. ಉಳಿದಂತೆ ಹಲವು ಕಡೆ 100 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ ಮಾಡಲಾಗಿದ್ದು ಆರೆಂಜ್‌ ಎಲರ್ಟ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಕೊಡಗು ಜಿಲ್ಲೆಯ ಚೆಂಬುವಿನಲ್ಲಿ 163 ಮಿಮೀ ಮಳೆಯಾದರೆ ಮಡಪ್ಪಾಡಿ 140 ಮಿಮೀ, ಗುತ್ತಿಗಾರು 111 ಮಿಮೀ, ಕಮಿಲ 113 ಮಿಮೀ , ಬಾಳಿಲ 126 ಮಿಮೀ , ಕೊಲ್ಲಮೊಗ್ರ 101 ಮಿಮೀ, ಕಲ್ಮಡ್ಕ 124 ಮಿಮೀ,  ಬಳ್ಪ 139 ಮಿಮೀ, ಬಂಟ್ವಾಳ 92 ಮಿಮೀ, ಕಲ್ಲಾಜೆ 143 ಮಿಮೀ, ಮಂಗಳೂರು 51 ಮಿಮೀ, ಸುಬ್ರಹ್ಮಣ್ಯ 134 ಮಿಮೀ , ಬೆಳ್ತಂಗಡಿ 183  ಮಿಮೀ, ಕೊಪ್ಪ 103 ಮಿಮೀ, ಮಂಚಿ 105 ಮಿಮೀ,   ಕೋಡಪದವು 92 ಮಿಮೀ,  ಪುತ್ತೂರು ಮುಂಡೂರು 140 ಮಿಮೀ ಮಳೆಯಾಗಿದೆ.

ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ,  ಹಾಗೂ ಉತ್ತರಕನ್ನಡ, ಕೊಡಗು,  ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ನಿರೀಕ್ಷೆ ಮಾಡಲಾಗಿದೆ. ಹೀಗಾಗಿ ಹೈ ಎಲರ್ಟ್‌ ಹವಾಮಾನ ಇಲಾಖಾ ಸೂಚಿಸಿದೆ.  ಸತತ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಹೆಚ್ಚಾಗಿ ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮುನ್ನಚ್ಚೆರಿಕೆ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ 4 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಮಳೆ ಅವಾಂತರದಿಂದ ಹಾನಿಯಾಗಿದೆ. ಭಾರೀ ಮಳೆಗೆ ಸೋಮವಾರಪೇಟೆ ತಾಲೂಕಿನಲ್ಲಿ  ಮನೆಯೊಂದು ಬಿರುಕು ಬಿಟ್ಟಿದೆ. ಉತ್ತರಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಿಂದ ಹಾನಿಯಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

40 minutes ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

18 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago