Advertisement
ಸುದ್ದಿಗಳು

ಮಳೆಯ ದಾಖಲೆ | 200 ಮಿಮೀ ಮಳೆ ದಾಖಲಾಯಿತು ಹಲವು ಕಡೆ | ಹಲವು ಕಡೆ ಭೂಕುಸಿತ- ಉಕ್ಕಿ ಹರಿದ ನದಿಗಳು | ಜನಜೀವನ ಅಸ್ತವ್ಯಸ್ತ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿತ್ತು. ಎಲ್ಲೆಡೆಯೂ ಭಾರೀ ಮಳೆ. ಹಲವು ಕಡೆಗಳಲ್ಲಿ  150 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸುಳ್ಯದ ಕಲ್ಲಾಜೆ, ಬೆಳ್ತಂಗಡಿ, ಕಾರ್ಕಳ ಪ್ರದೇಶದಲ್ಲಿ  200 ಮಿಮೀ ಮಳೆಯಾಗಿದೆ.
ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 191 ಮಿಮೀ ಮಳೆಯಾಗಿದೆ. ಎಲ್ಲೆಡೆಯೂ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಮುಂದಿನ 24 ಗಂಟೆಗಳ ಕಾಲ ಆರೆಂಜ್‌ ಎಲರ್ಟ್‌ ಇದೆ. ಉತ್ತಮ ಮಳೆಯಾಗಬಹುದು.

Advertisement
Advertisement
Advertisement
Advertisement
ಎಲ್ಲೆಲ್ಲೆ ಎಷ್ಟು ಮಳೆ ?
  • ಸುಳ್ಯ 166 ಮಿಮೀ,
  • ಕಲ್ಲಾಜೆಯಲ್ಲಿ 204 ಮಿಮೀ,
  • ಮಡಪ್ಪಾಡಿ 75  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 214 ಮಿಮೀ,
  • ಕಮಿಲ 169 ಮಿಮೀ ,
  • ಬಾಳಿಲ 169 ಮಿಮೀ ,
  • ಕೊಲ್ಲಮೊಗ್ರ 189 ಮಿಮೀ,
  • ಸುಬ್ರಹ್ಮಣ್ಯ 173 ಮಿಮೀ ,
  • ಕಲ್ಮಡ್ಕ 176 ಮಿಮೀ,
  • ಬಳ್ಪ 211 ಮಿಮೀ,
  • ಬೆಳ್ಳಾರೆ 145 ಮಿಮೀ ,
  • ಬೆಳ್ತಂಗಡಿ 179  ಮಿಮೀ,
  • ಪುತ್ತೂರು ಮುಂಡೂರು 110 ಮಿಮೀ ,
  • ಕೋಡಿಂಬಾಳ 144 ಮಿಮೀ,
  • ಕಾರ್ಕಳದಲ್ಲಿ 200 ಮಿಮೀ ಮಳೆಯಾಗಿದೆ. 
ನೇತ್ರಾವತಿ ಹಾಗೂ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಹಲವು ಕಡೆಗಳಲ್ಲಿ  ತೋಟಗಳಿಗೆ ನೀರು ನುಗ್ಗಿದೆ ಬಂಟ್ವಾಳದಲ್ಲಿ ಅಪಾಯಮಟ್ಟದಲ್ಲಿ  ನೇತ್ರಾವತಿ ನದಿ ಹರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಭೂಕುಸಿತ, ರಸ್ತೆ ಸಂಪರ್ಕ ಕಡಿತ ಸಂಭವಿಸಿದೆ. ಸುಳ್ಯ ತಾಲೂಕಿನ ಪಂಜದಲ್ಲಿ  ನದಿ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ಉಕ್ಕಿ ಹರಿದು ಸ್ನಾನ ಘಟ್ಟ ಜಲಾವೃತವಾಗಿದೆ. ಸಂಪಾಜೆ ಕಲ್ಲುಗುಂಡಿಯಲ್ಲಿ  ನೀರು ಹರಿದು ತೋಟಗಳಿಗೆ , ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿ ಭೂಕುಸಿತ ಸಂಭವಿಸಿ ಮನೆ ಅಪಾಯದಲ್ಲಿದೆ. ಈಗಲೂ ಮಳೆ ಧಾರಾಕಾರವಾಗಿ ಸುರಿಯುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

7 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

8 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

8 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago