ಸುದ್ದಿಗಳು

ಮಳೆಯ ದಾಖಲೆ | 200 ಮಿಮೀ ಮಳೆ ದಾಖಲಾಯಿತು ಹಲವು ಕಡೆ | ಹಲವು ಕಡೆ ಭೂಕುಸಿತ- ಉಕ್ಕಿ ಹರಿದ ನದಿಗಳು | ಜನಜೀವನ ಅಸ್ತವ್ಯಸ್ತ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿತ್ತು. ಎಲ್ಲೆಡೆಯೂ ಭಾರೀ ಮಳೆ. ಹಲವು ಕಡೆಗಳಲ್ಲಿ  150 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸುಳ್ಯದ ಕಲ್ಲಾಜೆ, ಬೆಳ್ತಂಗಡಿ, ಕಾರ್ಕಳ ಪ್ರದೇಶದಲ್ಲಿ  200 ಮಿಮೀ ಮಳೆಯಾಗಿದೆ.
ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 191 ಮಿಮೀ ಮಳೆಯಾಗಿದೆ. ಎಲ್ಲೆಡೆಯೂ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಮುಂದಿನ 24 ಗಂಟೆಗಳ ಕಾಲ ಆರೆಂಜ್‌ ಎಲರ್ಟ್‌ ಇದೆ. ಉತ್ತಮ ಮಳೆಯಾಗಬಹುದು.

Advertisement
Advertisement
ಎಲ್ಲೆಲ್ಲೆ ಎಷ್ಟು ಮಳೆ ?
  • ಸುಳ್ಯ 166 ಮಿಮೀ,
  • ಕಲ್ಲಾಜೆಯಲ್ಲಿ 204 ಮಿಮೀ,
  • ಮಡಪ್ಪಾಡಿ 75  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 214 ಮಿಮೀ,
  • ಕಮಿಲ 169 ಮಿಮೀ ,
  • ಬಾಳಿಲ 169 ಮಿಮೀ ,
  • ಕೊಲ್ಲಮೊಗ್ರ 189 ಮಿಮೀ,
  • ಸುಬ್ರಹ್ಮಣ್ಯ 173 ಮಿಮೀ ,
  • ಕಲ್ಮಡ್ಕ 176 ಮಿಮೀ,
  • ಬಳ್ಪ 211 ಮಿಮೀ,
  • ಬೆಳ್ಳಾರೆ 145 ಮಿಮೀ ,
  • ಬೆಳ್ತಂಗಡಿ 179  ಮಿಮೀ,
  • ಪುತ್ತೂರು ಮುಂಡೂರು 110 ಮಿಮೀ ,
  • ಕೋಡಿಂಬಾಳ 144 ಮಿಮೀ,
  • ಕಾರ್ಕಳದಲ್ಲಿ 200 ಮಿಮೀ ಮಳೆಯಾಗಿದೆ. 
ನೇತ್ರಾವತಿ ಹಾಗೂ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಹಲವು ಕಡೆಗಳಲ್ಲಿ  ತೋಟಗಳಿಗೆ ನೀರು ನುಗ್ಗಿದೆ ಬಂಟ್ವಾಳದಲ್ಲಿ ಅಪಾಯಮಟ್ಟದಲ್ಲಿ  ನೇತ್ರಾವತಿ ನದಿ ಹರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಭೂಕುಸಿತ, ರಸ್ತೆ ಸಂಪರ್ಕ ಕಡಿತ ಸಂಭವಿಸಿದೆ. ಸುಳ್ಯ ತಾಲೂಕಿನ ಪಂಜದಲ್ಲಿ  ನದಿ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ಉಕ್ಕಿ ಹರಿದು ಸ್ನಾನ ಘಟ್ಟ ಜಲಾವೃತವಾಗಿದೆ. ಸಂಪಾಜೆ ಕಲ್ಲುಗುಂಡಿಯಲ್ಲಿ  ನೀರು ಹರಿದು ತೋಟಗಳಿಗೆ , ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿ ಭೂಕುಸಿತ ಸಂಭವಿಸಿ ಮನೆ ಅಪಾಯದಲ್ಲಿದೆ. ಈಗಲೂ ಮಳೆ ಧಾರಾಕಾರವಾಗಿ ಸುರಿಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

5 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

5 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

8 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

8 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

8 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago