Advertisement
ಸುದ್ದಿಗಳು

ಮಳೆಯ ದಾಖಲೆ | 200 ಮಿಮೀ ಮಳೆ ದಾಖಲಾಯಿತು ಹಲವು ಕಡೆ | ಹಲವು ಕಡೆ ಭೂಕುಸಿತ- ಉಕ್ಕಿ ಹರಿದ ನದಿಗಳು | ಜನಜೀವನ ಅಸ್ತವ್ಯಸ್ತ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿತ್ತು. ಎಲ್ಲೆಡೆಯೂ ಭಾರೀ ಮಳೆ. ಹಲವು ಕಡೆಗಳಲ್ಲಿ  150 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸುಳ್ಯದ ಕಲ್ಲಾಜೆ, ಬೆಳ್ತಂಗಡಿ, ಕಾರ್ಕಳ ಪ್ರದೇಶದಲ್ಲಿ  200 ಮಿಮೀ ಮಳೆಯಾಗಿದೆ.
ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 191 ಮಿಮೀ ಮಳೆಯಾಗಿದೆ. ಎಲ್ಲೆಡೆಯೂ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಮುಂದಿನ 24 ಗಂಟೆಗಳ ಕಾಲ ಆರೆಂಜ್‌ ಎಲರ್ಟ್‌ ಇದೆ. ಉತ್ತಮ ಮಳೆಯಾಗಬಹುದು.

ಎಲ್ಲೆಲ್ಲೆ ಎಷ್ಟು ಮಳೆ ?
  • ಸುಳ್ಯ 166 ಮಿಮೀ,
  • ಕಲ್ಲಾಜೆಯಲ್ಲಿ 204 ಮಿಮೀ,
  • ಮಡಪ್ಪಾಡಿ 75  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 214 ಮಿಮೀ,
  • ಕಮಿಲ 169 ಮಿಮೀ ,
  • ಬಾಳಿಲ 169 ಮಿಮೀ ,
  • ಕೊಲ್ಲಮೊಗ್ರ 189 ಮಿಮೀ,
  • ಸುಬ್ರಹ್ಮಣ್ಯ 173 ಮಿಮೀ ,
  • ಕಲ್ಮಡ್ಕ 176 ಮಿಮೀ,
  • ಬಳ್ಪ 211 ಮಿಮೀ,
  • ಬೆಳ್ಳಾರೆ 145 ಮಿಮೀ ,
  • ಬೆಳ್ತಂಗಡಿ 179  ಮಿಮೀ,
  • ಪುತ್ತೂರು ಮುಂಡೂರು 110 ಮಿಮೀ ,
  • ಕೋಡಿಂಬಾಳ 144 ಮಿಮೀ,
  • ಕಾರ್ಕಳದಲ್ಲಿ 200 ಮಿಮೀ ಮಳೆಯಾಗಿದೆ. 
ನೇತ್ರಾವತಿ ಹಾಗೂ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಹಲವು ಕಡೆಗಳಲ್ಲಿ  ತೋಟಗಳಿಗೆ ನೀರು ನುಗ್ಗಿದೆ ಬಂಟ್ವಾಳದಲ್ಲಿ ಅಪಾಯಮಟ್ಟದಲ್ಲಿ  ನೇತ್ರಾವತಿ ನದಿ ಹರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಭೂಕುಸಿತ, ರಸ್ತೆ ಸಂಪರ್ಕ ಕಡಿತ ಸಂಭವಿಸಿದೆ. ಸುಳ್ಯ ತಾಲೂಕಿನ ಪಂಜದಲ್ಲಿ  ನದಿ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ಉಕ್ಕಿ ಹರಿದು ಸ್ನಾನ ಘಟ್ಟ ಜಲಾವೃತವಾಗಿದೆ. ಸಂಪಾಜೆ ಕಲ್ಲುಗುಂಡಿಯಲ್ಲಿ  ನೀರು ಹರಿದು ತೋಟಗಳಿಗೆ , ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿ ಭೂಕುಸಿತ ಸಂಭವಿಸಿ ಮನೆ ಅಪಾಯದಲ್ಲಿದೆ. ಈಗಲೂ ಮಳೆ ಧಾರಾಕಾರವಾಗಿ ಸುರಿಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

8 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

8 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

18 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

19 hours ago