Advertisement
ಸುದ್ದಿಗಳು

ಮಳೆಯ ದಾಖಲೆ | 200 ಮಿಮೀ ಮಳೆ ದಾಖಲಾಯಿತು ಹಲವು ಕಡೆ | ಹಲವು ಕಡೆ ಭೂಕುಸಿತ- ಉಕ್ಕಿ ಹರಿದ ನದಿಗಳು | ಜನಜೀವನ ಅಸ್ತವ್ಯಸ್ತ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿತ್ತು. ಎಲ್ಲೆಡೆಯೂ ಭಾರೀ ಮಳೆ. ಹಲವು ಕಡೆಗಳಲ್ಲಿ  150 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸುಳ್ಯದ ಕಲ್ಲಾಜೆ, ಬೆಳ್ತಂಗಡಿ, ಕಾರ್ಕಳ ಪ್ರದೇಶದಲ್ಲಿ  200 ಮಿಮೀ ಮಳೆಯಾಗಿದೆ.
ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 191 ಮಿಮೀ ಮಳೆಯಾಗಿದೆ. ಎಲ್ಲೆಡೆಯೂ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಮುಂದಿನ 24 ಗಂಟೆಗಳ ಕಾಲ ಆರೆಂಜ್‌ ಎಲರ್ಟ್‌ ಇದೆ. ಉತ್ತಮ ಮಳೆಯಾಗಬಹುದು.

ಎಲ್ಲೆಲ್ಲೆ ಎಷ್ಟು ಮಳೆ ?
  • ಸುಳ್ಯ 166 ಮಿಮೀ,
  • ಕಲ್ಲಾಜೆಯಲ್ಲಿ 204 ಮಿಮೀ,
  • ಮಡಪ್ಪಾಡಿ 75  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 214 ಮಿಮೀ,
  • ಕಮಿಲ 169 ಮಿಮೀ ,
  • ಬಾಳಿಲ 169 ಮಿಮೀ ,
  • ಕೊಲ್ಲಮೊಗ್ರ 189 ಮಿಮೀ,
  • ಸುಬ್ರಹ್ಮಣ್ಯ 173 ಮಿಮೀ ,
  • ಕಲ್ಮಡ್ಕ 176 ಮಿಮೀ,
  • ಬಳ್ಪ 211 ಮಿಮೀ,
  • ಬೆಳ್ಳಾರೆ 145 ಮಿಮೀ ,
  • ಬೆಳ್ತಂಗಡಿ 179  ಮಿಮೀ,
  • ಪುತ್ತೂರು ಮುಂಡೂರು 110 ಮಿಮೀ ,
  • ಕೋಡಿಂಬಾಳ 144 ಮಿಮೀ,
  • ಕಾರ್ಕಳದಲ್ಲಿ 200 ಮಿಮೀ ಮಳೆಯಾಗಿದೆ. 
ನೇತ್ರಾವತಿ ಹಾಗೂ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಹಲವು ಕಡೆಗಳಲ್ಲಿ  ತೋಟಗಳಿಗೆ ನೀರು ನುಗ್ಗಿದೆ ಬಂಟ್ವಾಳದಲ್ಲಿ ಅಪಾಯಮಟ್ಟದಲ್ಲಿ  ನೇತ್ರಾವತಿ ನದಿ ಹರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಭೂಕುಸಿತ, ರಸ್ತೆ ಸಂಪರ್ಕ ಕಡಿತ ಸಂಭವಿಸಿದೆ. ಸುಳ್ಯ ತಾಲೂಕಿನ ಪಂಜದಲ್ಲಿ  ನದಿ ತುಂಬಿ ಹರಿದು ಪಂಜ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ಉಕ್ಕಿ ಹರಿದು ಸ್ನಾನ ಘಟ್ಟ ಜಲಾವೃತವಾಗಿದೆ. ಸಂಪಾಜೆ ಕಲ್ಲುಗುಂಡಿಯಲ್ಲಿ  ನೀರು ಹರಿದು ತೋಟಗಳಿಗೆ , ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿ ಭೂಕುಸಿತ ಸಂಭವಿಸಿ ಮನೆ ಅಪಾಯದಲ್ಲಿದೆ. ಈಗಲೂ ಮಳೆ ಧಾರಾಕಾರವಾಗಿ ಸುರಿಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

2 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

12 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

13 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

13 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

19 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

21 hours ago