ಮಳೆ… ಮಳೆ… ಮಳೆ…! | ಎಲ್ಲೆಡೆಯೂ ನೀರೇ….ನೀರು | ಭೂಕುಸಿತ – ರಸ್ತೆ ಬ್ಲಾಕ್‌ – ನೀರಿನ ಮಟ್ಟ ಏರಿಕೆಯ ಸುದ್ದಿ |

July 10, 2022
2:35 PM

ಶನಿವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಎಲ್ಲೆಡೆಯೂ ನೀರಿನ ಮಟ್ಟ ಏರಿಕೆಯಾಗಿದೆ. ನಿರಂತರವಾಗಿ ಸುರಿಯುವ ಮಳೆಯಿಂದ ಭೂಕುಸಿತ, ಬರೆ ಕುಸಿತಗಳು ಅಲ್ಲಲ್ಲಿ  ನಡೆಯುತ್ತಿದೆ. ಮಳೆಯ ಕಾರಣದಿಂದ ಹೊಳೆ, ನದಿಯ ನೀರಿನ ಮಟ್ಟ ಏರಿಕೆಯಾಗಿ ರಸ್ತೆ ಸಂಚಾರವೂ ಹಲವು ಕಡೆ ತೊಂದರೆಯಾಗಿದೆ. ನೀರಿನ ಮಟ್ಟ ಏರಿಕೆಯಾಗುತ್ತಲೇ ಇದೆ.

Advertisement
Advertisement

ಏನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ನೀರಿನಿಂದ ಆವೃತವಾಗಿದೆ. ಕಳೆದ ದಿನದಿಂದ ಬಿಡದೆ ಸುರಿಯುತ್ತಿದೆ ಮಳೆ.
ದೇವಸ್ಥಾನದ ಸುತ್ತಮುತ್ತ ನೀರಿನಿಂದ ಆವರಿಸಿಕೊಂಡು ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ತೊಂದರೆಯಾಗುತ್ತಿದೆ. ಅರ್ಚಕರ ವಸತಿಗೃಹದ ಒಳಗೆ ನೀರು ತುಂಬಿಕೊಂಡಿದೆ.

ಕಾಸರಗೋಡು ಸುಳ್ಯ ರಾಜ್ಯ ಹೆದ್ದಾರಿಯಲ್ಲಿ ವಿಪರೀತ ಮಳೆ ಸುರಿತ್ತಿದ್ದು ಮಳೆಗೆ ನೀರಿನ ಮಟ್ಟ ಹೆಚ್ಚಾಗಿದೆ. ನೀರು ಹೊಳೆಯಲ್ಲಿ ತುಂಬಿ ರಸ್ತೆಗೆ  ಬಂದಿದೆ. ಪರಪ್ಪೆಯ ರಸ್ತೆ  ಕೆಸರುಮಯವಾಗಿದೆ.

ಕುಮಾರಧಾರಾ ಹಾಗೂ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ಅಪಾಯದ ಮಟ್ಟವನ್ನು ಸಮೀಪಿಸುತ್ತಿದೆ. ಬಂಟ್ವಾಳ ಸೇರಿದಂತೆ ನದಿ ಪ್ರದೇಶಗಳಲ್ಲಿ  ತೋಟಗಳಿಗೆ ನೀರು ನುಗ್ಗಿದೆ. ಮನೆಗಳಿಗೂ ನೀರು ನುಗ್ಗುವ ಭೀತಿ ಇದೆ.

Advertisement

ಶೃಂಗೇರಿ ಹೊರನಾಡು ರಸ್ತೆ ನಡುವೆಯೂ ಭೂಕುಸಿತ ಸಂಭವಿಸಿದೆ. ಚಾರ್ಮಾಡಿ ಘಾಟಿ ಪ್ರದೇಶದಲ್ಲೂ ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಆಗುಂಬೆ ಘಾಟಿ ಪ್ರದೇಶದಲ್ಲೂ ಭೂಕುಸಿತ ಸಂಭವಿಸಿದೆ.

ಕಾಸರಗೋಡು ಜಿಲ್ಲೆಯ ಮಧೂರು ಹೊಳೆಯೂ ತುಂಬಿ ಹರಿದಿದೆ. ಹೀಗಾಗಿ ಮಧೂರು ದೇವಸ್ಥಾನದ ಒಳಗೆ ನೀರು ಹರಿದಿದೆ.

ಮಾಹಿತಿ : ಅನನ್ಯ ಎಚ್‌ ಸುಬ್ರಹ್ಮಣ್ಯ

 

Advertisement

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು
June 22, 2025
8:00 AM
by: ದ ರೂರಲ್ ಮಿರರ್.ಕಾಂ
ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ
June 21, 2025
11:07 PM
by: The Rural Mirror ಸುದ್ದಿಜಾಲ
ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ
June 21, 2025
9:08 PM
by: ಮಹೇಶ್ ಪುಚ್ಚಪ್ಪಾಡಿ
ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |
June 21, 2025
4:04 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group