ಶನಿವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಎಲ್ಲೆಡೆಯೂ ನೀರಿನ ಮಟ್ಟ ಏರಿಕೆಯಾಗಿದೆ. ನಿರಂತರವಾಗಿ ಸುರಿಯುವ ಮಳೆಯಿಂದ ಭೂಕುಸಿತ, ಬರೆ ಕುಸಿತಗಳು ಅಲ್ಲಲ್ಲಿ ನಡೆಯುತ್ತಿದೆ. ಮಳೆಯ ಕಾರಣದಿಂದ ಹೊಳೆ, ನದಿಯ ನೀರಿನ ಮಟ್ಟ ಏರಿಕೆಯಾಗಿ ರಸ್ತೆ ಸಂಚಾರವೂ ಹಲವು ಕಡೆ ತೊಂದರೆಯಾಗಿದೆ. ನೀರಿನ ಮಟ್ಟ ಏರಿಕೆಯಾಗುತ್ತಲೇ ಇದೆ.
ಏನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ನೀರಿನಿಂದ ಆವೃತವಾಗಿದೆ. ಕಳೆದ ದಿನದಿಂದ ಬಿಡದೆ ಸುರಿಯುತ್ತಿದೆ ಮಳೆ.
ದೇವಸ್ಥಾನದ ಸುತ್ತಮುತ್ತ ನೀರಿನಿಂದ ಆವರಿಸಿಕೊಂಡು ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ತೊಂದರೆಯಾಗುತ್ತಿದೆ. ಅರ್ಚಕರ ವಸತಿಗೃಹದ ಒಳಗೆ ನೀರು ತುಂಬಿಕೊಂಡಿದೆ.
ಕಾಸರಗೋಡು ಸುಳ್ಯ ರಾಜ್ಯ ಹೆದ್ದಾರಿಯಲ್ಲಿ ವಿಪರೀತ ಮಳೆ ಸುರಿತ್ತಿದ್ದು ಮಳೆಗೆ ನೀರಿನ ಮಟ್ಟ ಹೆಚ್ಚಾಗಿದೆ. ನೀರು ಹೊಳೆಯಲ್ಲಿ ತುಂಬಿ ರಸ್ತೆಗೆ ಬಂದಿದೆ. ಪರಪ್ಪೆಯ ರಸ್ತೆ ಕೆಸರುಮಯವಾಗಿದೆ.
ಕುಮಾರಧಾರಾ ಹಾಗೂ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ಅಪಾಯದ ಮಟ್ಟವನ್ನು ಸಮೀಪಿಸುತ್ತಿದೆ. ಬಂಟ್ವಾಳ ಸೇರಿದಂತೆ ನದಿ ಪ್ರದೇಶಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ. ಮನೆಗಳಿಗೂ ನೀರು ನುಗ್ಗುವ ಭೀತಿ ಇದೆ.
ಶೃಂಗೇರಿ ಹೊರನಾಡು ರಸ್ತೆ ನಡುವೆಯೂ ಭೂಕುಸಿತ ಸಂಭವಿಸಿದೆ. ಚಾರ್ಮಾಡಿ ಘಾಟಿ ಪ್ರದೇಶದಲ್ಲೂ ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಆಗುಂಬೆ ಘಾಟಿ ಪ್ರದೇಶದಲ್ಲೂ ಭೂಕುಸಿತ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಮಧೂರು ಹೊಳೆಯೂ ತುಂಬಿ ಹರಿದಿದೆ. ಹೀಗಾಗಿ ಮಧೂರು ದೇವಸ್ಥಾನದ ಒಳಗೆ ನೀರು ಹರಿದಿದೆ.
ಮಾಹಿತಿ : ಅನನ್ಯ ಎಚ್ ಸುಬ್ರಹ್ಮಣ್ಯ
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…