ಶನಿವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಎಲ್ಲೆಡೆಯೂ ನೀರಿನ ಮಟ್ಟ ಏರಿಕೆಯಾಗಿದೆ. ನಿರಂತರವಾಗಿ ಸುರಿಯುವ ಮಳೆಯಿಂದ ಭೂಕುಸಿತ, ಬರೆ ಕುಸಿತಗಳು ಅಲ್ಲಲ್ಲಿ ನಡೆಯುತ್ತಿದೆ. ಮಳೆಯ ಕಾರಣದಿಂದ ಹೊಳೆ, ನದಿಯ ನೀರಿನ ಮಟ್ಟ ಏರಿಕೆಯಾಗಿ ರಸ್ತೆ ಸಂಚಾರವೂ ಹಲವು ಕಡೆ ತೊಂದರೆಯಾಗಿದೆ. ನೀರಿನ ಮಟ್ಟ ಏರಿಕೆಯಾಗುತ್ತಲೇ ಇದೆ.
ಏನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ನೀರಿನಿಂದ ಆವೃತವಾಗಿದೆ. ಕಳೆದ ದಿನದಿಂದ ಬಿಡದೆ ಸುರಿಯುತ್ತಿದೆ ಮಳೆ.
ದೇವಸ್ಥಾನದ ಸುತ್ತಮುತ್ತ ನೀರಿನಿಂದ ಆವರಿಸಿಕೊಂಡು ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ತೊಂದರೆಯಾಗುತ್ತಿದೆ. ಅರ್ಚಕರ ವಸತಿಗೃಹದ ಒಳಗೆ ನೀರು ತುಂಬಿಕೊಂಡಿದೆ.
ಕಾಸರಗೋಡು ಸುಳ್ಯ ರಾಜ್ಯ ಹೆದ್ದಾರಿಯಲ್ಲಿ ವಿಪರೀತ ಮಳೆ ಸುರಿತ್ತಿದ್ದು ಮಳೆಗೆ ನೀರಿನ ಮಟ್ಟ ಹೆಚ್ಚಾಗಿದೆ. ನೀರು ಹೊಳೆಯಲ್ಲಿ ತುಂಬಿ ರಸ್ತೆಗೆ ಬಂದಿದೆ. ಪರಪ್ಪೆಯ ರಸ್ತೆ ಕೆಸರುಮಯವಾಗಿದೆ.
ಕುಮಾರಧಾರಾ ಹಾಗೂ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ಅಪಾಯದ ಮಟ್ಟವನ್ನು ಸಮೀಪಿಸುತ್ತಿದೆ. ಬಂಟ್ವಾಳ ಸೇರಿದಂತೆ ನದಿ ಪ್ರದೇಶಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ. ಮನೆಗಳಿಗೂ ನೀರು ನುಗ್ಗುವ ಭೀತಿ ಇದೆ.
ಶೃಂಗೇರಿ ಹೊರನಾಡು ರಸ್ತೆ ನಡುವೆಯೂ ಭೂಕುಸಿತ ಸಂಭವಿಸಿದೆ. ಚಾರ್ಮಾಡಿ ಘಾಟಿ ಪ್ರದೇಶದಲ್ಲೂ ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಆಗುಂಬೆ ಘಾಟಿ ಪ್ರದೇಶದಲ್ಲೂ ಭೂಕುಸಿತ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಮಧೂರು ಹೊಳೆಯೂ ತುಂಬಿ ಹರಿದಿದೆ. ಹೀಗಾಗಿ ಮಧೂರು ದೇವಸ್ಥಾನದ ಒಳಗೆ ನೀರು ಹರಿದಿದೆ.
ಮಾಹಿತಿ : ಅನನ್ಯ ಎಚ್ ಸುಬ್ರಹ್ಮಣ್ಯ
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…