ಶನಿವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಎಲ್ಲೆಡೆಯೂ ನೀರಿನ ಮಟ್ಟ ಏರಿಕೆಯಾಗಿದೆ. ನಿರಂತರವಾಗಿ ಸುರಿಯುವ ಮಳೆಯಿಂದ ಭೂಕುಸಿತ, ಬರೆ ಕುಸಿತಗಳು ಅಲ್ಲಲ್ಲಿ ನಡೆಯುತ್ತಿದೆ. ಮಳೆಯ ಕಾರಣದಿಂದ ಹೊಳೆ, ನದಿಯ ನೀರಿನ ಮಟ್ಟ ಏರಿಕೆಯಾಗಿ ರಸ್ತೆ ಸಂಚಾರವೂ ಹಲವು ಕಡೆ ತೊಂದರೆಯಾಗಿದೆ. ನೀರಿನ ಮಟ್ಟ ಏರಿಕೆಯಾಗುತ್ತಲೇ ಇದೆ.
ಏನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ನೀರಿನಿಂದ ಆವೃತವಾಗಿದೆ. ಕಳೆದ ದಿನದಿಂದ ಬಿಡದೆ ಸುರಿಯುತ್ತಿದೆ ಮಳೆ.
ದೇವಸ್ಥಾನದ ಸುತ್ತಮುತ್ತ ನೀರಿನಿಂದ ಆವರಿಸಿಕೊಂಡು ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ತೊಂದರೆಯಾಗುತ್ತಿದೆ. ಅರ್ಚಕರ ವಸತಿಗೃಹದ ಒಳಗೆ ನೀರು ತುಂಬಿಕೊಂಡಿದೆ.
ಕಾಸರಗೋಡು ಸುಳ್ಯ ರಾಜ್ಯ ಹೆದ್ದಾರಿಯಲ್ಲಿ ವಿಪರೀತ ಮಳೆ ಸುರಿತ್ತಿದ್ದು ಮಳೆಗೆ ನೀರಿನ ಮಟ್ಟ ಹೆಚ್ಚಾಗಿದೆ. ನೀರು ಹೊಳೆಯಲ್ಲಿ ತುಂಬಿ ರಸ್ತೆಗೆ ಬಂದಿದೆ. ಪರಪ್ಪೆಯ ರಸ್ತೆ ಕೆಸರುಮಯವಾಗಿದೆ.
ಕುಮಾರಧಾರಾ ಹಾಗೂ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ಅಪಾಯದ ಮಟ್ಟವನ್ನು ಸಮೀಪಿಸುತ್ತಿದೆ. ಬಂಟ್ವಾಳ ಸೇರಿದಂತೆ ನದಿ ಪ್ರದೇಶಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ. ಮನೆಗಳಿಗೂ ನೀರು ನುಗ್ಗುವ ಭೀತಿ ಇದೆ.
ಶೃಂಗೇರಿ ಹೊರನಾಡು ರಸ್ತೆ ನಡುವೆಯೂ ಭೂಕುಸಿತ ಸಂಭವಿಸಿದೆ. ಚಾರ್ಮಾಡಿ ಘಾಟಿ ಪ್ರದೇಶದಲ್ಲೂ ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಆಗುಂಬೆ ಘಾಟಿ ಪ್ರದೇಶದಲ್ಲೂ ಭೂಕುಸಿತ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಮಧೂರು ಹೊಳೆಯೂ ತುಂಬಿ ಹರಿದಿದೆ. ಹೀಗಾಗಿ ಮಧೂರು ದೇವಸ್ಥಾನದ ಒಳಗೆ ನೀರು ಹರಿದಿದೆ.
ಮಾಹಿತಿ : ಅನನ್ಯ ಎಚ್ ಸುಬ್ರಹ್ಮಣ್ಯ
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…