ರಾಜ್ಯದ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ದ ಕ ಜಿಲ್ಲೆಯಲ್ಲಿ ಗುಡುಗು -ಸಿಡಿಲು ಸಹಿತ ಭಾರೀ ಮಳೆಯಾದರೆ ವಿಜಯಪುರದಲ್ಲಿ ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಪ್ರದೇಶದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಬೆಳ್ತಂಗಡಿಯ ಹಲವು ಕಡೆ ಸಿಡಿಲು ಬಡಿದು ಮನೆಗಳಿಗೆ ಹಾನಿಯಾದರೆ ಗಾಳಿಗೆ ಮರ ಬಿದ್ದು ರಸ್ತೆ ತಡೆಯಾಗಿತ್ತು. ತಣ್ಣೀರುಪಂತದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಮಳೆ ಗಾಳಿಗೆ ವಿದ್ಯುತ್ ಕೈಕೊಟ್ಟಿದ್ದು ನಗರ ಸೇರಿದಂತೆ ಗ್ರಾಮೀಣ ಭಾಗ ಕತ್ತಲಲ್ಲಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು ಚನ್ನಪಟ್ಟಣ , ಹಾಸನ ಮೊದಲಾದ ಕಡೆಗಳಲ್ಲಿ ಕೂಡಾ ಮಳೆಯಾಗಿದ್ದು ವಿಜಯಪುರ ನಗರದಲ್ಲಿ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಅಶೋಕ ರಾಮು , ಭಾಸಾಬ್ ಕರ್ಜಗಿ, ಜಾವೀದ್ ಹದೀಲ್ ಜಾಲಗೇರಿ ಎಂದು ಗುರುತಿಸಲಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…