ರಾಜ್ಯದ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ದ ಕ ಜಿಲ್ಲೆಯಲ್ಲಿ ಗುಡುಗು -ಸಿಡಿಲು ಸಹಿತ ಭಾರೀ ಮಳೆಯಾದರೆ ವಿಜಯಪುರದಲ್ಲಿ ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಪ್ರದೇಶದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಬೆಳ್ತಂಗಡಿಯ ಹಲವು ಕಡೆ ಸಿಡಿಲು ಬಡಿದು ಮನೆಗಳಿಗೆ ಹಾನಿಯಾದರೆ ಗಾಳಿಗೆ ಮರ ಬಿದ್ದು ರಸ್ತೆ ತಡೆಯಾಗಿತ್ತು. ತಣ್ಣೀರುಪಂತದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಮಳೆ ಗಾಳಿಗೆ ವಿದ್ಯುತ್ ಕೈಕೊಟ್ಟಿದ್ದು ನಗರ ಸೇರಿದಂತೆ ಗ್ರಾಮೀಣ ಭಾಗ ಕತ್ತಲಲ್ಲಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು ಚನ್ನಪಟ್ಟಣ , ಹಾಸನ ಮೊದಲಾದ ಕಡೆಗಳಲ್ಲಿ ಕೂಡಾ ಮಳೆಯಾಗಿದ್ದು ವಿಜಯಪುರ ನಗರದಲ್ಲಿ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಅಶೋಕ ರಾಮು , ಭಾಸಾಬ್ ಕರ್ಜಗಿ, ಜಾವೀದ್ ಹದೀಲ್ ಜಾಲಗೇರಿ ಎಂದು ಗುರುತಿಸಲಾಗಿದೆ.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…