ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುತ್ತಿದೆ. ಅದರಲ್ಲೀ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಆರಂಭವಾದ ಮಳೆ ಧೋ…. ಸುರಿಯುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಹಲವು ಕಡೆಗಳಲ್ಲಿ 100 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 4 ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಜೂನ್ 19ರ ವೇಳೆಗೆ ಕ್ಷೀಣಿಸಿತ್ತು. ಜುಲೈ 8 ರಿಂದ ಮತ್ತೆ ಮುಂಗಾರು ಬಿರುಸು ಪಡೆದುಕೊಂಡಿತ್ತು. ಇದೀಗ ಕರಾವಳಿ ಜಿಲ್ಲೆಗಳಲ್ಲಿ ಮಳೆ “ಚಳಿ” ಹಿಡಿಸಿದೆ. ಕೃಷಿಕರ ನಿದ್ದೆ ಕೆಡಿಸಲು ಆರಂಭಿಸಿದೆ. ಕೃಷಿ ಹಾನಿಯ ಬಗ್ಗೆ ಭಯ ಆರಂಭಗೊಂಡಿದೆ. ಸದ್ಯ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಘೋಷಣೆ ಇದ್ದು ಭಾನುವಾರವೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂಬಯಿಯಿಂದ ತೊಡಗಿ ಇಡೀ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಇದೆ. ಜುಲೈ 19ರ ನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ. ಕರ್ನಾಟಕದಲ್ಲಿ ಜುಲೈ 21ರವರೆಗೂ ಮಳೆಯಾಗಲಿದೆ.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…