ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುತ್ತಿದೆ. ಅದರಲ್ಲೀ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಆರಂಭವಾದ ಮಳೆ ಧೋ…. ಸುರಿಯುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಹಲವು ಕಡೆಗಳಲ್ಲಿ 100 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 4 ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಜೂನ್ 19ರ ವೇಳೆಗೆ ಕ್ಷೀಣಿಸಿತ್ತು. ಜುಲೈ 8 ರಿಂದ ಮತ್ತೆ ಮುಂಗಾರು ಬಿರುಸು ಪಡೆದುಕೊಂಡಿತ್ತು. ಇದೀಗ ಕರಾವಳಿ ಜಿಲ್ಲೆಗಳಲ್ಲಿ ಮಳೆ “ಚಳಿ” ಹಿಡಿಸಿದೆ. ಕೃಷಿಕರ ನಿದ್ದೆ ಕೆಡಿಸಲು ಆರಂಭಿಸಿದೆ. ಕೃಷಿ ಹಾನಿಯ ಬಗ್ಗೆ ಭಯ ಆರಂಭಗೊಂಡಿದೆ. ಸದ್ಯ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಘೋಷಣೆ ಇದ್ದು ಭಾನುವಾರವೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂಬಯಿಯಿಂದ ತೊಡಗಿ ಇಡೀ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಇದೆ. ಜುಲೈ 19ರ ನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ. ಕರ್ನಾಟಕದಲ್ಲಿ ಜುಲೈ 21ರವರೆಗೂ ಮಳೆಯಾಗಲಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…