ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುತ್ತಿದೆ. ಅದರಲ್ಲೀ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಆರಂಭವಾದ ಮಳೆ ಧೋ…. ಸುರಿಯುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಹಲವು ಕಡೆಗಳಲ್ಲಿ 100 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 4 ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಜೂನ್ 19ರ ವೇಳೆಗೆ ಕ್ಷೀಣಿಸಿತ್ತು. ಜುಲೈ 8 ರಿಂದ ಮತ್ತೆ ಮುಂಗಾರು ಬಿರುಸು ಪಡೆದುಕೊಂಡಿತ್ತು. ಇದೀಗ ಕರಾವಳಿ ಜಿಲ್ಲೆಗಳಲ್ಲಿ ಮಳೆ “ಚಳಿ” ಹಿಡಿಸಿದೆ. ಕೃಷಿಕರ ನಿದ್ದೆ ಕೆಡಿಸಲು ಆರಂಭಿಸಿದೆ. ಕೃಷಿ ಹಾನಿಯ ಬಗ್ಗೆ ಭಯ ಆರಂಭಗೊಂಡಿದೆ. ಸದ್ಯ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಘೋಷಣೆ ಇದ್ದು ಭಾನುವಾರವೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂಬಯಿಯಿಂದ ತೊಡಗಿ ಇಡೀ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಇದೆ. ಜುಲೈ 19ರ ನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ. ಕರ್ನಾಟಕದಲ್ಲಿ ಜುಲೈ 21ರವರೆಗೂ ಮಳೆಯಾಗಲಿದೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…