ನೆಲಕಚ್ಚಿದ ಮೆಕ್ಕೆಜೋಳ ಇಳುವರಿ | ನಷ್ಟದಲ್ಲಿ ರೈತರು

November 1, 2025
8:24 PM

ಮೆಕ್ಕೆಜೋಳ ಬೆಳೆಯುವ ದಾವಣಗೆರೆ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವೆಡೆ ಮೆಕ್ಕೆಜೋಳ ಬೆಳೆಯು ಬಾರಿ ಮಳೆಯಿಂದ ನಾಶವಾಗಿದ್ದು, ರೈತರು ಇಳುವರಿ ಕುಸಿತದಿಂದ ನಷ್ಟ ಅನುಭವಿಸುವ ಎಲ್ಲ ಲಕ್ಷಣಗಳಿವೆ.

ಈ ವರ್ಷಾರಂಭದಲ್ಲಿ ಮಳೆ ಉತ್ತಮ ಆರಂಭ ಕಂಡಿದ್ದು, ಇದರಿಂದಾಗಿ ಬೇಸಾಯದ ಚಟುವಟಿಕೆಗೂ ಕೂಡ ಉತ್ತಮವಾಗಿ ಪ್ರಾರಂಭಗೊಂಡಿದ್ದವು. ಸಕಾಲದಲ್ಲಿ ಉತ್ತಮ ಬಿತ್ತನೆಯೂ ಸಾಧ್ಯವಾಗಿತ್ತು. ತದನಂತರ ಏರ್ಪಟ್ಟಿದ್ದ ಬಿತ್ತನೆಬೀಜ, ಗೊಬ್ಬರ ಮತ್ತು ರಸಗೊಬ್ಬರ ಅಭಾವದ ನಡುವೆಯೂ ಉತ್ತಮ ಮಳೆ ಮತ್ತು ಉಳುಮೆಯಿಂದ ಬೆಳೆಗಳು ಹುಲಸಾಗಿ ಬೆಳೆದಿದ್ದವು. ಈ ಹಿನ್ನಲೆಯಲ್ಲಿ ರೈತರು ಉತ್ತಮ ಇಳುವರಿಯ ನಿರೀಕ್ಷೆ ಇಟ್ಟುಕೊಂಡಿದ್ದರು. ಅಲ್ಲದೆ ಆರ್ಥಿಕವಾಗಿ ಈ ಬಾರಿ ಅಲ್ಪಸ್ವಲ್ಪ ಲಾಭಗಳಿಸುವ ಚಿಂತನೆಯಲ್ಲಿದ್ದರು.

ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ನೆಲಕ್ಕೆ ಬಿದ್ದು ಮೊಳಕೆಯೊಡೆದು ಹಾಳಾಗುವ ಪರಿಸ್ಥಿತಿಗೆ ತಲುಪಿದೆ. ಇದೀಗ ಆರ್ಥಿಕವಾಗಿ ನೆಲಕಚ್ಚಿರುವ ರೈತರನ್ನು ಮೇಲೆತ್ತುವವರು ಯಾರು ಎನ್ನುವ ಆತಂಕ ಶುರುವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ
March 11, 2026
7:13 PM
by: ಅರುಣ್‌ ಕುಮಾರ್ ಕಾಂಚೋಡು
ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ
March 11, 2026
7:19 AM
by: ದ ರೂರಲ್ ಮಿರರ್.ಕಾಂ
ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್
March 11, 2026
7:08 AM
by: ದ ರೂರಲ್ ಮಿರರ್.ಕಾಂ
ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror