ನೆಲಕಚ್ಚಿದ ಮೆಕ್ಕೆಜೋಳ ಇಳುವರಿ | ನಷ್ಟದಲ್ಲಿ ರೈತರು

November 1, 2025
8:24 PM

ಮೆಕ್ಕೆಜೋಳ ಬೆಳೆಯುವ ದಾವಣಗೆರೆ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವೆಡೆ ಮೆಕ್ಕೆಜೋಳ ಬೆಳೆಯು ಬಾರಿ ಮಳೆಯಿಂದ ನಾಶವಾಗಿದ್ದು, ರೈತರು ಇಳುವರಿ ಕುಸಿತದಿಂದ ನಷ್ಟ ಅನುಭವಿಸುವ ಎಲ್ಲ ಲಕ್ಷಣಗಳಿವೆ.

ಈ ವರ್ಷಾರಂಭದಲ್ಲಿ ಮಳೆ ಉತ್ತಮ ಆರಂಭ ಕಂಡಿದ್ದು, ಇದರಿಂದಾಗಿ ಬೇಸಾಯದ ಚಟುವಟಿಕೆಗೂ ಕೂಡ ಉತ್ತಮವಾಗಿ ಪ್ರಾರಂಭಗೊಂಡಿದ್ದವು. ಸಕಾಲದಲ್ಲಿ ಉತ್ತಮ ಬಿತ್ತನೆಯೂ ಸಾಧ್ಯವಾಗಿತ್ತು. ತದನಂತರ ಏರ್ಪಟ್ಟಿದ್ದ ಬಿತ್ತನೆಬೀಜ, ಗೊಬ್ಬರ ಮತ್ತು ರಸಗೊಬ್ಬರ ಅಭಾವದ ನಡುವೆಯೂ ಉತ್ತಮ ಮಳೆ ಮತ್ತು ಉಳುಮೆಯಿಂದ ಬೆಳೆಗಳು ಹುಲಸಾಗಿ ಬೆಳೆದಿದ್ದವು. ಈ ಹಿನ್ನಲೆಯಲ್ಲಿ ರೈತರು ಉತ್ತಮ ಇಳುವರಿಯ ನಿರೀಕ್ಷೆ ಇಟ್ಟುಕೊಂಡಿದ್ದರು. ಅಲ್ಲದೆ ಆರ್ಥಿಕವಾಗಿ ಈ ಬಾರಿ ಅಲ್ಪಸ್ವಲ್ಪ ಲಾಭಗಳಿಸುವ ಚಿಂತನೆಯಲ್ಲಿದ್ದರು.

ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ನೆಲಕ್ಕೆ ಬಿದ್ದು ಮೊಳಕೆಯೊಡೆದು ಹಾಳಾಗುವ ಪರಿಸ್ಥಿತಿಗೆ ತಲುಪಿದೆ. ಇದೀಗ ಆರ್ಥಿಕವಾಗಿ ನೆಲಕಚ್ಚಿರುವ ರೈತರನ್ನು ಮೇಲೆತ್ತುವವರು ಯಾರು ಎನ್ನುವ ಆತಂಕ ಶುರುವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror