ಮೆಕ್ಕೆಜೋಳ ಬೆಳೆಯುವ ದಾವಣಗೆರೆ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವೆಡೆ ಮೆಕ್ಕೆಜೋಳ ಬೆಳೆಯು ಬಾರಿ ಮಳೆಯಿಂದ ನಾಶವಾಗಿದ್ದು, ರೈತರು ಇಳುವರಿ ಕುಸಿತದಿಂದ ನಷ್ಟ ಅನುಭವಿಸುವ ಎಲ್ಲ ಲಕ್ಷಣಗಳಿವೆ.
ಈ ವರ್ಷಾರಂಭದಲ್ಲಿ ಮಳೆ ಉತ್ತಮ ಆರಂಭ ಕಂಡಿದ್ದು, ಇದರಿಂದಾಗಿ ಬೇಸಾಯದ ಚಟುವಟಿಕೆಗೂ ಕೂಡ ಉತ್ತಮವಾಗಿ ಪ್ರಾರಂಭಗೊಂಡಿದ್ದವು. ಸಕಾಲದಲ್ಲಿ ಉತ್ತಮ ಬಿತ್ತನೆಯೂ ಸಾಧ್ಯವಾಗಿತ್ತು. ತದನಂತರ ಏರ್ಪಟ್ಟಿದ್ದ ಬಿತ್ತನೆಬೀಜ, ಗೊಬ್ಬರ ಮತ್ತು ರಸಗೊಬ್ಬರ ಅಭಾವದ ನಡುವೆಯೂ ಉತ್ತಮ ಮಳೆ ಮತ್ತು ಉಳುಮೆಯಿಂದ ಬೆಳೆಗಳು ಹುಲಸಾಗಿ ಬೆಳೆದಿದ್ದವು. ಈ ಹಿನ್ನಲೆಯಲ್ಲಿ ರೈತರು ಉತ್ತಮ ಇಳುವರಿಯ ನಿರೀಕ್ಷೆ ಇಟ್ಟುಕೊಂಡಿದ್ದರು. ಅಲ್ಲದೆ ಆರ್ಥಿಕವಾಗಿ ಈ ಬಾರಿ ಅಲ್ಪಸ್ವಲ್ಪ ಲಾಭಗಳಿಸುವ ಚಿಂತನೆಯಲ್ಲಿದ್ದರು.
ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ನೆಲಕ್ಕೆ ಬಿದ್ದು ಮೊಳಕೆಯೊಡೆದು ಹಾಳಾಗುವ ಪರಿಸ್ಥಿತಿಗೆ ತಲುಪಿದೆ. ಇದೀಗ ಆರ್ಥಿಕವಾಗಿ ನೆಲಕಚ್ಚಿರುವ ರೈತರನ್ನು ಮೇಲೆತ್ತುವವರು ಯಾರು ಎನ್ನುವ ಆತಂಕ ಶುರುವಾಗಿದೆ.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…