ಮೆಕ್ಕೆಜೋಳ ಬೆಳೆಯುವ ದಾವಣಗೆರೆ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವೆಡೆ ಮೆಕ್ಕೆಜೋಳ ಬೆಳೆಯು ಬಾರಿ ಮಳೆಯಿಂದ ನಾಶವಾಗಿದ್ದು, ರೈತರು ಇಳುವರಿ ಕುಸಿತದಿಂದ ನಷ್ಟ ಅನುಭವಿಸುವ ಎಲ್ಲ ಲಕ್ಷಣಗಳಿವೆ.
ಈ ವರ್ಷಾರಂಭದಲ್ಲಿ ಮಳೆ ಉತ್ತಮ ಆರಂಭ ಕಂಡಿದ್ದು, ಇದರಿಂದಾಗಿ ಬೇಸಾಯದ ಚಟುವಟಿಕೆಗೂ ಕೂಡ ಉತ್ತಮವಾಗಿ ಪ್ರಾರಂಭಗೊಂಡಿದ್ದವು. ಸಕಾಲದಲ್ಲಿ ಉತ್ತಮ ಬಿತ್ತನೆಯೂ ಸಾಧ್ಯವಾಗಿತ್ತು. ತದನಂತರ ಏರ್ಪಟ್ಟಿದ್ದ ಬಿತ್ತನೆಬೀಜ, ಗೊಬ್ಬರ ಮತ್ತು ರಸಗೊಬ್ಬರ ಅಭಾವದ ನಡುವೆಯೂ ಉತ್ತಮ ಮಳೆ ಮತ್ತು ಉಳುಮೆಯಿಂದ ಬೆಳೆಗಳು ಹುಲಸಾಗಿ ಬೆಳೆದಿದ್ದವು. ಈ ಹಿನ್ನಲೆಯಲ್ಲಿ ರೈತರು ಉತ್ತಮ ಇಳುವರಿಯ ನಿರೀಕ್ಷೆ ಇಟ್ಟುಕೊಂಡಿದ್ದರು. ಅಲ್ಲದೆ ಆರ್ಥಿಕವಾಗಿ ಈ ಬಾರಿ ಅಲ್ಪಸ್ವಲ್ಪ ಲಾಭಗಳಿಸುವ ಚಿಂತನೆಯಲ್ಲಿದ್ದರು.
ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ನೆಲಕ್ಕೆ ಬಿದ್ದು ಮೊಳಕೆಯೊಡೆದು ಹಾಳಾಗುವ ಪರಿಸ್ಥಿತಿಗೆ ತಲುಪಿದೆ. ಇದೀಗ ಆರ್ಥಿಕವಾಗಿ ನೆಲಕಚ್ಚಿರುವ ರೈತರನ್ನು ಮೇಲೆತ್ತುವವರು ಯಾರು ಎನ್ನುವ ಆತಂಕ ಶುರುವಾಗಿದೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…