ಮೆಕ್ಕೆಜೋಳ ಬೆಳೆಯುವ ದಾವಣಗೆರೆ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವೆಡೆ ಮೆಕ್ಕೆಜೋಳ ಬೆಳೆಯು ಬಾರಿ ಮಳೆಯಿಂದ ನಾಶವಾಗಿದ್ದು, ರೈತರು ಇಳುವರಿ ಕುಸಿತದಿಂದ ನಷ್ಟ ಅನುಭವಿಸುವ ಎಲ್ಲ ಲಕ್ಷಣಗಳಿವೆ.
ಈ ವರ್ಷಾರಂಭದಲ್ಲಿ ಮಳೆ ಉತ್ತಮ ಆರಂಭ ಕಂಡಿದ್ದು, ಇದರಿಂದಾಗಿ ಬೇಸಾಯದ ಚಟುವಟಿಕೆಗೂ ಕೂಡ ಉತ್ತಮವಾಗಿ ಪ್ರಾರಂಭಗೊಂಡಿದ್ದವು. ಸಕಾಲದಲ್ಲಿ ಉತ್ತಮ ಬಿತ್ತನೆಯೂ ಸಾಧ್ಯವಾಗಿತ್ತು. ತದನಂತರ ಏರ್ಪಟ್ಟಿದ್ದ ಬಿತ್ತನೆಬೀಜ, ಗೊಬ್ಬರ ಮತ್ತು ರಸಗೊಬ್ಬರ ಅಭಾವದ ನಡುವೆಯೂ ಉತ್ತಮ ಮಳೆ ಮತ್ತು ಉಳುಮೆಯಿಂದ ಬೆಳೆಗಳು ಹುಲಸಾಗಿ ಬೆಳೆದಿದ್ದವು. ಈ ಹಿನ್ನಲೆಯಲ್ಲಿ ರೈತರು ಉತ್ತಮ ಇಳುವರಿಯ ನಿರೀಕ್ಷೆ ಇಟ್ಟುಕೊಂಡಿದ್ದರು. ಅಲ್ಲದೆ ಆರ್ಥಿಕವಾಗಿ ಈ ಬಾರಿ ಅಲ್ಪಸ್ವಲ್ಪ ಲಾಭಗಳಿಸುವ ಚಿಂತನೆಯಲ್ಲಿದ್ದರು.
ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ನೆಲಕ್ಕೆ ಬಿದ್ದು ಮೊಳಕೆಯೊಡೆದು ಹಾಳಾಗುವ ಪರಿಸ್ಥಿತಿಗೆ ತಲುಪಿದೆ. ಇದೀಗ ಆರ್ಥಿಕವಾಗಿ ನೆಲಕಚ್ಚಿರುವ ರೈತರನ್ನು ಮೇಲೆತ್ತುವವರು ಯಾರು ಎನ್ನುವ ಆತಂಕ ಶುರುವಾಗಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…