Advertisement
MIRROR FOCUS

ವಾಡಿಕೆಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ | ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತ | ಈಗ ಎಲರ್ಟ್‌…ಎಲರ್ಟ್..!

Share

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಗೆ ಈ ಬಾರಿ ವಾಡಿಕೆಗಿಂತ ಮುನ್ನವೇ ಮುಂಗಾರು ಪ್ರವೇಶವಾಗಿದೆ. ಇಂದು ಬೆಳಗ್ಗಿನಿಂದಲೇ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ ಗಾಳಿಯ ಪರಿಣಾಮವಾಗಿ ಹಲವೆಡೆ ಮರಗಳು ಧರೆಗುರುಳಿವೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ನೇತ್ರಾವತಿ, ಕುಮಾರಧಾರಾ, ಫಲ್ಗುಣಿ ನದಿಗಳು ತುಂಬಿ ಹರಿಯುತ್ತಿವೆ.  ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಇಂದು ಮುಂಜಾನೆಯಿಂದ ಧಾರಕಾರ ಮಳೆಯಾಗುತ್ತಿದು ಜನ ಜೀವನ ಬಾಧಿತಗೊಂಡಿದೆ. ಮಳೆಯಿಂದಾಗಿ ಹಲವೆಡೆ ಹಾನಿ ಸಂಭವಿಸಿದೆ. ಚಿಕ್ಕಮಗಳೂರು, ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಕಳಸ, ಹೊರನಾಡು, ಶೃಂಗೇರಿ, ಕಲ್ಲತಗಿರಿ ಸೇರಿದಂತೆ ಹಲವೆಡೆ ಹೆಚ್ಚಿನ ಮಳೆಯಾಗುತ್ತಿದೆ.  ಇದೀಗ ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಉಡುಪಿಯ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಶಿವಮೊಗ್ಗದಲ್ಲಿ ಜಲಾ ನಯನ ಪ್ರದೇಶದಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ತುಂಗಾ ನದಿಗೆ ಕಟ್ಟಲಾದ ಗಾಜನೂರು ಜಲಾಶಯ ಭರ್ತಿಯಾಗಿದೆ.ಜಲಾಶಯ ಮುಂಗಾರು ಪೂರ್ವದಲ್ಲಿಯೇ ಭರ್ತಿಯಾಗಿದ್ದು,  3.71 ಟಿಎಂಸಿ ನೀರಿನ ಸಾಮರ್ಥ್ಯದ ಜಲಾಶಯಕ್ಕೆ 2000 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.

ಭಾರೀ ಮಳೆಯ ಕಾರಣದಿಂದ  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಎಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಎಲರ್ಟ್, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಎಲ್ಲೋ ಎಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್‌ನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

3 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

11 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

11 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

13 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

20 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

21 hours ago