Advertisement
MIRROR FOCUS

ವಾಡಿಕೆಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ | ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತ | ಈಗ ಎಲರ್ಟ್‌…ಎಲರ್ಟ್..!

Share

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಗೆ ಈ ಬಾರಿ ವಾಡಿಕೆಗಿಂತ ಮುನ್ನವೇ ಮುಂಗಾರು ಪ್ರವೇಶವಾಗಿದೆ. ಇಂದು ಬೆಳಗ್ಗಿನಿಂದಲೇ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ ಗಾಳಿಯ ಪರಿಣಾಮವಾಗಿ ಹಲವೆಡೆ ಮರಗಳು ಧರೆಗುರುಳಿವೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ನೇತ್ರಾವತಿ, ಕುಮಾರಧಾರಾ, ಫಲ್ಗುಣಿ ನದಿಗಳು ತುಂಬಿ ಹರಿಯುತ್ತಿವೆ.  ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಇಂದು ಮುಂಜಾನೆಯಿಂದ ಧಾರಕಾರ ಮಳೆಯಾಗುತ್ತಿದು ಜನ ಜೀವನ ಬಾಧಿತಗೊಂಡಿದೆ. ಮಳೆಯಿಂದಾಗಿ ಹಲವೆಡೆ ಹಾನಿ ಸಂಭವಿಸಿದೆ. ಚಿಕ್ಕಮಗಳೂರು, ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಕಳಸ, ಹೊರನಾಡು, ಶೃಂಗೇರಿ, ಕಲ್ಲತಗಿರಿ ಸೇರಿದಂತೆ ಹಲವೆಡೆ ಹೆಚ್ಚಿನ ಮಳೆಯಾಗುತ್ತಿದೆ.  ಇದೀಗ ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಉಡುಪಿಯ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement

ಶಿವಮೊಗ್ಗದಲ್ಲಿ ಜಲಾ ನಯನ ಪ್ರದೇಶದಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ತುಂಗಾ ನದಿಗೆ ಕಟ್ಟಲಾದ ಗಾಜನೂರು ಜಲಾಶಯ ಭರ್ತಿಯಾಗಿದೆ.ಜಲಾಶಯ ಮುಂಗಾರು ಪೂರ್ವದಲ್ಲಿಯೇ ಭರ್ತಿಯಾಗಿದ್ದು,  3.71 ಟಿಎಂಸಿ ನೀರಿನ ಸಾಮರ್ಥ್ಯದ ಜಲಾಶಯಕ್ಕೆ 2000 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.

ಭಾರೀ ಮಳೆಯ ಕಾರಣದಿಂದ  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಎಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಎಲರ್ಟ್, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಎಲ್ಲೋ ಎಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್‌ನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

36 minutes ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

57 minutes ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 hour ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

1 hour ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago