ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ(Climate change) ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ ಉತ್ತರ ಮತ್ತು ದಕ್ಷಿಣದಿಂದ ಪಶ್ಚಿಮ ಭಾಗದವರೆಗೆ ಬಿಸಿ ಶಾಖದ(Heat wave) ಅನುಭವವಾಗುತ್ತಿದೆ. ಈ ನಡುವೆ ಕೆಲ ರಾಜ್ಯಗಳಲ್ಲಿ ಮಳೆಯ(Rain) ಮುನ್ಸೂಚನೆ ಸಿಕ್ಕಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಪ್ರದೇಶದಲ್ಲಿ ಏಪ್ರಿಲ್ 30 ರಿಂದ ಮೇ 2 ರವರೆಗೆ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಭಾರೀ ಮಳೆ(Heavy rain) ಮತ್ತು ಹಿಮಪಾತ(Snowfall) ಉಂಟಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ವಿದರ್ಭ, ಮರಾಠವಾಡ, ತೆಲಂಗಾಣ, ಛತ್ತೀಸ್ಗಢ ಮತ್ತು ದಕ್ಷಿಣ ಒಡಿಶಾದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್ನ ಉತ್ತರ ಭಾಗಗಳಲ್ಲಿ ಪ್ರತ್ಯೇಕವಾದ ಆಲಿಕಲ್ಲು ಮಳೆಯೊಂದಿಗೆ ಲಘುವಾಗಿ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗಬಹುದು. ಉತ್ತರ ಹರಿಯಾಣ ಮತ್ತು ವಾಯವ್ಯ ರಾಜಸ್ಥಾನದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಕೇರಳದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹರಿಯಾಣ ಮತ್ತು ವಾಯವ್ಯ ರಾಜಸ್ಥಾನದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಕೇರಳದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ದೇಶದ ಹಲವು ಭಾಗಗಳಲ್ಲಿ ಇಂದು ಅತ್ಯಂತ ಬಿಸಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಪೂರ್ವ ಭಾರತದಲ್ಲಿ ಮೇ 1 ರವರೆಗೆ ತೀವ್ರ ಶಾಖದ ಅಲೆಗಳು ಮುಂದುವರಿಯುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 5 ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ಮುಂದುವರಿಯುವ ಸಾಧ್ಯತೆಯಿದೆ.
ತೀವ್ರ ಬಿಸಿಗಾಳಿ ಹೆಚ್ಚುತ್ತಿರುವ ಹಿನ್ನೆಲೆ ಮುಂದಿನ ಮೂರು ದಿನಗಳ ಕಾಲ ಬಿಹಾರ, ಬಂಗಾಳ ಮತ್ತು ಒಡಿಶಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲೂ ಬಿಸಿಗಾಳಿಯ ಬಗ್ಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Source : weather reports and digital media
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…